ರೈತರಿಗೆ ಆಯಾ ಪ್ರದೇಶ-ನಿರ್ದಿಷ್ಟ ಸಲಹೆಗಳು ಮತ್ತು ನೈಜ ಸಮಯದ ಮಾಹಿತಿಯನ್ನು ಒದಗಿಸುವ ದೃಷ್ಟಿಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಕೃಷಿ ಇಲಾಖೆಯು ಕೃತಕ ಬುದ್ಧಿಮತ್ತೆ-ಚಾಲಿಯತ (Artificial intelligence) ವೇದಿಕೆಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, 2026 ರ ಖಾರಿಫ್ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಮಾತ್ರವಲ್ಲ, ಈ ವ್ಯವಸ್ಥೆಯು ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನ ನೀಡುವ ಗುರಿಯನ್ನು ಇದು ಹೊಂದಿದೆ.
ಎಐ ವೇದಿಕೆಯನ್ನು ಇಸ್ರೋ, ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ ಮತ್ತು ಬಿಇಎಲ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದು ರೈತರ ಫೋನ್ಗಳಿಗೆ ಕನ್ನಡದಲ್ಲಿ ಸಮಗ್ರ ಸಂದೇಶವನ್ನು ಕಳುಹಿಸುತ್ತಿದೆ. ಇದರಿಂದ ರೈತರು ಬೆಳೆ ಬೆಳೆಯುವ ಹಂತದಲ್ಲಿ ಅಥವಾ ಯಾವುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದ್ದರೆ, ಈ ವ್ಯವಸ್ಥೆಯು ಸೂಕ್ತವಾದ ಕೀಟನಾಶಕ ಬಳಕೆಯ ಕುರಿತ ಸಲಹೆಗಳನ್ನು ಕಳುಹಿಸುತ್ತದೆ. ಅದೇ ರೀತಿ, ಕೊಯ್ಲು ಅವಧಿಯಲ್ಲಿ ರೈತರು ಕೊಯ್ಲು ವಿಳಂಬ ಮಾಡಬೇಕೆ ಅಥವಾ ತಮ್ಮ ಕೊಯ್ಲು ಮಾಡಿದ ಬೆಳೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಮಾರ್ಗದರ್ಶನದೊಂದಿಗೆ ಹವಾಮಾನ ಎಚ್ಚರಿಕೆಯನ್ನು ಸ್ವೀಕರಿಸುತ್ತಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…