Advertisement
ಸುದ್ದಿಗಳು

ರೈತರಿಗಾಗಿ ಕೃಷಿ ಇಲಾಖೆಯಿಂದ ಎಐ ವೇದಿಕೆ

Share

ರೈತರಿಗೆ ಆಯಾ ಪ್ರದೇಶ-ನಿರ್ದಿಷ್ಟ ಸಲಹೆಗಳು ಮತ್ತು ನೈಜ ಸಮಯದ ಮಾಹಿತಿಯನ್ನು ಒದಗಿಸುವ ದೃಷ್ಟಿಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಕೃಷಿ ಇಲಾಖೆಯು ಕೃತಕ ಬುದ್ಧಿಮತ್ತೆ-ಚಾಲಿಯತ (Artificial intelligence) ವೇದಿಕೆಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, 2026 ರ ಖಾರಿಫ್ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಮಾತ್ರವಲ್ಲ, ಈ ವ್ಯವಸ್ಥೆಯು ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನ ನೀಡುವ ಗುರಿಯನ್ನು ಇದು ಹೊಂದಿದೆ.

ಎಐ ವೇದಿಕೆಯನ್ನು ಇಸ್ರೋ, ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ ಮತ್ತು ಬಿಇಎಲ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದು ರೈತರ ಫೋನ್‍ಗಳಿಗೆ ಕನ್ನಡದಲ್ಲಿ ಸಮಗ್ರ ಸಂದೇಶವನ್ನು ಕಳುಹಿಸುತ್ತಿದೆ. ಇದರಿಂದ ರೈತರು ಬೆಳೆ ಬೆಳೆಯುವ ಹಂತದಲ್ಲಿ ಅಥವಾ ಯಾವುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದ್ದರೆ, ಈ ವ್ಯವಸ್ಥೆಯು ಸೂಕ್ತವಾದ ಕೀಟನಾಶಕ ಬಳಕೆಯ ಕುರಿತ ಸಲಹೆಗಳನ್ನು ಕಳುಹಿಸುತ್ತದೆ. ಅದೇ ರೀತಿ, ಕೊಯ್ಲು ಅವಧಿಯಲ್ಲಿ ರೈತರು ಕೊಯ್ಲು ವಿಳಂಬ ಮಾಡಬೇಕೆ ಅಥವಾ ತಮ್ಮ ಕೊಯ್ಲು ಮಾಡಿದ ಬೆಳೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಮಾರ್ಗದರ್ಶನದೊಂದಿಗೆ ಹವಾಮಾನ ಎಚ್ಚರಿಕೆಯನ್ನು ಸ್ವೀಕರಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

7 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

17 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

17 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

22 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

22 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

1 day ago