ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಡುಗೆ ಎಣ್ಣೆ ಹಾಗೂ ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಲಾಗಿದೆ.ಪ್ರಸಕ್ತ ಸಾಲಿನಿಂದ 2030-31ರವರೆಗೆ ಏಳು ವರ್ಷಗಳಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಮತ್ತು ಅಡುಗೆ ಎಣ್ಣೆ ತಯಾರಿಕೆಯಲ್ಲಿ ಆತ್ಮ ನಿರ್ಭರತೆ ಸಾಧಿಸುವ ಕಾರ್ಯ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ 10 ಸಾವಿರದ 103 ಕೋಟಿ ರೂಪಾಯಿಗಳ ಹಣಕಾಸು ಸೌಲಭ್ಯವನ್ನು ಒದಗಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.2004ರಲ್ಲಿ ತಮಿಳಿಗೆ, 2005ರಲ್ಲಿ ಸಂಸ್ಕೃತಕ್ಕೆ, 2008ರ ಅಕ್ಟೋಬರ್ 31ರಂದು ಕನ್ನಡ ಮತ್ತು ತೆಲುಗಿಗೆ , 2013ರಲ್ಲಿ ಮಳಿಯಾಲಂಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿತ್ತು. ಈಗ ಹೊಸದಾಗಿ ಐದು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನದ ಗೌರವವನ್ನು ನೀಡುವ ಮೂಲಕ ಒಟ್ಟು 11 ಭಾಷೆಗಳನ್ನು ಶಾಸ್ತ್ರೀಯ ಪಟ್ಟಿಗೆ ಸೇರಿಸಲಾಗಿದೆ.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಕೃಷೋನ್ನತಿ ಹಾಗೂ ಸುಸ್ಥಿರ ಕೃಷಿ ಅಭಿವೃದ್ಧಿ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಒಂದು ಲಕ್ಷ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದರು.
ಆಹಾರ ಖಾದ್ಯವಾಗಿ ಅಡುಗೆ ಎಣ್ಣೆಗೆ ಬಹಳಷ್ಟು ಬೇಡಿಕೆ ಇದೆ. ಇದಕ್ಕಾಗಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ತಾಳೆ ಕೃಷಿಯತ್ತ ಗಮನಹರಿಸಲಾಗಿದೆ. ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…