ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಡುಗೆ ಎಣ್ಣೆ ಹಾಗೂ ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಲಾಗಿದೆ.ಪ್ರಸಕ್ತ ಸಾಲಿನಿಂದ 2030-31ರವರೆಗೆ ಏಳು ವರ್ಷಗಳಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಮತ್ತು ಅಡುಗೆ ಎಣ್ಣೆ ತಯಾರಿಕೆಯಲ್ಲಿ ಆತ್ಮ ನಿರ್ಭರತೆ ಸಾಧಿಸುವ ಕಾರ್ಯ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ 10 ಸಾವಿರದ 103 ಕೋಟಿ ರೂಪಾಯಿಗಳ ಹಣಕಾಸು ಸೌಲಭ್ಯವನ್ನು ಒದಗಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.2004ರಲ್ಲಿ ತಮಿಳಿಗೆ, 2005ರಲ್ಲಿ ಸಂಸ್ಕೃತಕ್ಕೆ, 2008ರ ಅಕ್ಟೋಬರ್ 31ರಂದು ಕನ್ನಡ ಮತ್ತು ತೆಲುಗಿಗೆ , 2013ರಲ್ಲಿ ಮಳಿಯಾಲಂಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿತ್ತು. ಈಗ ಹೊಸದಾಗಿ ಐದು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನದ ಗೌರವವನ್ನು ನೀಡುವ ಮೂಲಕ ಒಟ್ಟು 11 ಭಾಷೆಗಳನ್ನು ಶಾಸ್ತ್ರೀಯ ಪಟ್ಟಿಗೆ ಸೇರಿಸಲಾಗಿದೆ.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಕೃಷೋನ್ನತಿ ಹಾಗೂ ಸುಸ್ಥಿರ ಕೃಷಿ ಅಭಿವೃದ್ಧಿ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಒಂದು ಲಕ್ಷ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದರು.
ಆಹಾರ ಖಾದ್ಯವಾಗಿ ಅಡುಗೆ ಎಣ್ಣೆಗೆ ಬಹಳಷ್ಟು ಬೇಡಿಕೆ ಇದೆ. ಇದಕ್ಕಾಗಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ತಾಳೆ ಕೃಷಿಯತ್ತ ಗಮನಹರಿಸಲಾಗಿದೆ. ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…