Advertisement
MIRROR FOCUS

ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |

Share

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಡುಗೆ ಎಣ್ಣೆ ಹಾಗೂ ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ  ಸಾಧಿಸುವ ಮಹತ್ವಾಕಾಂಕ್ಷಿ ಯೋಜನೆಗೆ  ಅನುಮೋದನೆ ನೀಡಲಾಗಿದೆ.ಪ್ರಸಕ್ತ ಸಾಲಿನಿಂದ  2030-31ರವರೆಗೆ  ಏಳು ವರ್ಷಗಳಲ್ಲಿ   ಎಣ್ಣೆ ಕಾಳುಗಳ ಉತ್ಪಾದನೆ ಮತ್ತು   ಅಡುಗೆ ಎಣ್ಣೆ  ತಯಾರಿಕೆಯಲ್ಲಿ ಆತ್ಮ ನಿರ್ಭರತೆ ಸಾಧಿಸುವ ಕಾರ್ಯ ಯೋಜನೆಗೆ  ಅನುಮೋದನೆ ನೀಡಲಾಗಿದೆ. ಇದಕ್ಕಾಗಿ  10 ಸಾವಿರದ 103 ಕೋಟಿ ರೂಪಾಯಿಗಳ  ಹಣಕಾಸು ಸೌಲಭ್ಯವನ್ನು ಒದಗಿಸಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು. ಸಚಿವ ಸಂಪುಟ  ಸಭೆಯಲ್ಲಿ   ಮರಾಠಿ,  ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ  ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.2004ರಲ್ಲಿ  ತಮಿಳಿಗೆ,  2005ರಲ್ಲಿ ಸಂಸ್ಕೃತಕ್ಕೆ, 2008ರ ಅಕ್ಟೋಬರ್ 31ರಂದು ಕನ್ನಡ ಮತ್ತು  ತೆಲುಗಿಗೆ , 2013ರಲ್ಲಿ  ಮಳಿಯಾಲಂಗೆ   ಕೇಂದ್ರ ಸರ್ಕಾರ  ಶಾಸ್ತ್ರೀಯ ಸ್ಥಾನಮಾನ ನೀಡಿತ್ತು. ಈಗ ಹೊಸದಾಗಿ  ಐದು ಭಾಷೆಗಳಿಗೆ  ಶಾಸ್ತ್ರೀಯ ಸ್ಥಾನಮಾನದ  ಗೌರವವನ್ನು ನೀಡುವ ಮೂಲಕ ಒಟ್ಟು 11 ಭಾಷೆಗಳನ್ನು  ಶಾಸ್ತ್ರೀಯ ಪಟ್ಟಿಗೆ  ಸೇರಿಸಲಾಗಿದೆ.

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಕೃಷೋನ್ನತಿ  ಹಾಗೂ ಸುಸ್ಥಿರ ಕೃಷಿ ಅಭಿವೃದ್ಧಿ ಪ್ರಧಾನ ಮಂತ್ರಿ  ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಿಗೆ  ಸಂಪುಟ ಅನುಮೋದನೆ ನೀಡಿದ್ದು, ಒಂದು ಲಕ್ಷ ಕೋಟಿ ರೂಪಾಯಿ ಅನುದಾನ  ಒದಗಿಸಲಾಗಿದೆ ಎಂದರು.

ಆಹಾರ ಖಾದ್ಯವಾಗಿ ಅಡುಗೆ ಎಣ್ಣೆಗೆ ಬಹಳಷ್ಟು ಬೇಡಿಕೆ ಇದೆ. ಇದಕ್ಕಾಗಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ತಾಳೆ ಕೃಷಿಯತ್ತ ಗಮನಹರಿಸಲಾಗಿದೆ. ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

23 minutes ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

5 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

11 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

11 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago