ಮಾಹಿತಿ

ರೈತರ ಮೊಗದಲ್ಲಿ ಮಂದಹಾಸ | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡುವ ಗುರಿ | ಇಂಧನ ಸಚಿವ

Share

ಬೇಸಿಗೆ ಕಾಲ, ಸುಡು ಬಿಸಿಲು, ಬೆಳೆಗಳಿಗೆ ನೀರು ಹಾಯಿಸೋದೆ ರೈತರ ಚಿಂತೆ. ಅದರ ಜೊತೆಗೆ ಪದೇ ಪದೇ ಕೈ ಕೊಡುವ ಕರೆಂಟ್ ನಿಂದ ರೈತರು ಬೇಸತ್ತು ಹೋಗಿದ್ದಾರೆ.  ಆದರೆ ಇಂಧನ ಸಚಿವರ ಈ  ಭರವಸೆ ರೈತರ ಮೊಗದಲ್ಲಿ  ಮಂದಹಾಸ ಮೂಡಿಸಿದೆ. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿವರ್ಷ ಸಬ್ಸಿಡಿ ರೂಪದಲ್ಲಿ ರಾಜ್ಯ ಸರ್ಕಾರ 12 ಸಾವಿರ ಕೋಟಿ ರೂ.ಗಳನ್ನು ನೀಡುತ್ತಿದೆ. ರೈತರಿಗೆ 7 ಗಂಟೆಗಳ ಕಾಲ ನಿರಂತರ ಗುಣ ಮಟ್ಟದ ವಿದ್ಯುತ್‌ ನೀಡಲು ಆದ್ಯತೆ ಕೊಡಲಾಗುವುದು ಎಂದು ಇಂಧನ ಸಚಿವ ಸುನಿಲ್‌ ಕುಮಾರ್ ಹೇಳಿದರು.

Advertisement

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್‌ ನ   ಸಿ.ಎನ್.  ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 2012 ರ ಅಂತ್ಯಕ್ಕೆ ರಾಜ್ಯದ ಎಲ್ಲಾ ವಿದ್ಯುತ್‌ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ 1,31,143 ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಮರು ವಿದ್ಯುತ್ ಕಡೆ ಹೆಜ್ಜೆಯನ್ನು ಇಡಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಿಎಂ ಕುಸಮ್ ಯೋಜನೆಯಡಿ ರೈತರ ಪಂಪಸೆಟ್ ಗಳಿಗೆ ಕೇಂದ್ರ ಸರ್ಕಾರದಿಂದ 7.5 ಹೆಚ್ ಪಿ ಸಾಮಾರ್ಥ್ಯದ ಸೌರ ಪಂಪಸೆಟ್ ಗೆ ಶೇ.10 ರಷ್ಟು ಕೇಂದ್ರ ಸಹಾಯಧನ ಒದಗಿಸಲಿದೆ. ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದ ರೈತ ಫಲಾನುಭವಿಗಳಿಗೆ ಶೇ.30 ರಷ್ಟು ಹಾಗೂ ಪರಿಶಿಷ್ಟ ಜಾತಿ/ಪಂಗಡ ವರ್ಗದ ಫಲಾನುಭವಿಯ ಪಂಪಸೆಟ್‌ಗೆ ಶೇ.50 ರಷ್ಟು ರಾಜ್ಯದಿಂದ ಸಹಾಯಧನ ಒದಗಿಸಲಾಗುವುದು.  ಇನ್ನುಳಿದ ಹಣ ರೈತ ಫಲಾನುಭವಿಗಳಿಂದ ಭರಿಸಿ ಯೋಜನೆಯನ್ನು ಕೈಡಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ರಾಜ್ಯದ ಬೆಸ್ಕಾಂ, ಹೆಸ್ಕಾಂ, ಫೆಸ್ಟ್‌ ವಿದ್ಯುತ್ ಸರಬರಾಜು ಕಂಪನಿಗಳಿಗೆ ಒಟ್ಟು 3,37,331 ಕೃಷಿ ಪಂಪ್‌ಸೆಟ್‌ಗಳನ್ನು ಹಂಚಿಕೆ ಮಾಡಲಾಗಿದೆ.ರಾಜ್ಯದಲ್ಲಿ 1302 ಮನಾ ಸಾಮರ್ಥ್ಯದ ಸೋಲಾರ್ ಘಟಕ ಅನುಷ್ಟಾನಗೊಳಿಸಲಾಗುವುದು ಎಂದು ತಿಳಿಸಿದರು.

ನಿಗದಿತ ಅವಧಿಯಲ್ಲಿ ಬಿಲ್ ಕಟ್ಟದಿದ್ದರೆ ಪವರ್ ಕಟ್ :

ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿ ಕಡುಬಡವರಿಗೆ 40 ಯುನಿಟ್ ವರೆಗೆ ಉಚಿತವಾಗಿ ನೀಡಲಾಗುತ್ತಿದೆ. 40 ಯುನಿಟ್ ನಂತರ ಆಗುವ ಬಿಲ್‌ನ್ನು ಭರಿಸಲು ಹಿಂದೇಟು ಹಾಕಿದರೆ ಅಂತಹವರ ಮನೆಯ ಪದ‌ ಕಟ್ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು. ಬಿಜೆಪಿಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಚಿತ ವಿದ್ಯುತ್‌ ನೀಡುವ ಭರಾಟೆಯಲ್ಲಿ ಹೆಸ್ಕಾಂ, ಕೆಪಿಟಿಸಿಎಲ್ ಹಾಗೂ ಇನ್ನಿತರ ಕಂಪನಿಯನ್ನು ದಿವಾಳಿತನದತ್ತ ಕೊಂಡೊಯ್ಯಲು ಸಾಧ್ಯವಿಲ್ಲ.

ವಿದ್ಯುತ್ ಕಂಪನಿಗಳನ್ನು ಸುಸ್ತಿರಗೊಳಿಸಲು ಸಹಕಾರ ನೀಡಬೇಕಾಗಿದೆ ಎಂದರು. ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಲ್ಲಿ  ರಾಜ್ಯದ 26 ಲಕ್ಷ 8 ಸಾವಿರ ಫಲಾನುಭವಿಗಳು ಇದ್ದಾರೆ. ಉಚಿತವಾಗಿ ಕೃಷಿ ಪಂಪಸೆಟ್‌ಗಳಿಗೆ ವಿದ್ಯುತ ಪಡೆಯುವ ರೈತರ ಸಂಖ್ಯೆ 33 ಲಕ್ಷ 4 ಸಾವಿರ ಇದೆ, ಅಮೃತ ಯೋಜನೆಯಡಿ 75 ಯುನಿಟ್‌ವರೆಗೆ ಎಸ್ಸಿ, ಎಸ್ಟಿ ವರ್ಗದ 24 ಲಕ್ಷ ಫಲಾನುಭವಿಗಳು ವಿದ್ಯುತ್ ಪಡೆದುಕೊಳ್ಳುತ್ತಿದ್ದಾರೆ. ಬೆಸ್ಕಾಂ, ಮೆಸ್ಕಾಂ ಹೆಸ್ಕಾಂ, ಜೆಸ್ಕಾಂ, ಸೆಸ್ಕ್, ಕೆಪಿಟಿಸಿಎಲ್, ಕೆಪಿಸಿಎಲ್‌ ವಿದ್ಯುತ್‌ ಕಂಪನಿಗಳ ಒಟ್ಟು ಸಾಲ 72,114.84 ಕೋಟಿಯಷ್ಟು ಇದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

14 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

15 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

1 day ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

1 day ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

1 day ago