Advertisement
ಮಾಹಿತಿ

ರೈತರ ಮೊಗದಲ್ಲಿ ಮಂದಹಾಸ | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡುವ ಗುರಿ | ಇಂಧನ ಸಚಿವ

Share

ಬೇಸಿಗೆ ಕಾಲ, ಸುಡು ಬಿಸಿಲು, ಬೆಳೆಗಳಿಗೆ ನೀರು ಹಾಯಿಸೋದೆ ರೈತರ ಚಿಂತೆ. ಅದರ ಜೊತೆಗೆ ಪದೇ ಪದೇ ಕೈ ಕೊಡುವ ಕರೆಂಟ್ ನಿಂದ ರೈತರು ಬೇಸತ್ತು ಹೋಗಿದ್ದಾರೆ.  ಆದರೆ ಇಂಧನ ಸಚಿವರ ಈ  ಭರವಸೆ ರೈತರ ಮೊಗದಲ್ಲಿ  ಮಂದಹಾಸ ಮೂಡಿಸಿದೆ. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿವರ್ಷ ಸಬ್ಸಿಡಿ ರೂಪದಲ್ಲಿ ರಾಜ್ಯ ಸರ್ಕಾರ 12 ಸಾವಿರ ಕೋಟಿ ರೂ.ಗಳನ್ನು ನೀಡುತ್ತಿದೆ. ರೈತರಿಗೆ 7 ಗಂಟೆಗಳ ಕಾಲ ನಿರಂತರ ಗುಣ ಮಟ್ಟದ ವಿದ್ಯುತ್‌ ನೀಡಲು ಆದ್ಯತೆ ಕೊಡಲಾಗುವುದು ಎಂದು ಇಂಧನ ಸಚಿವ ಸುನಿಲ್‌ ಕುಮಾರ್ ಹೇಳಿದರು.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್‌ ನ   ಸಿ.ಎನ್.  ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 2012 ರ ಅಂತ್ಯಕ್ಕೆ ರಾಜ್ಯದ ಎಲ್ಲಾ ವಿದ್ಯುತ್‌ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ 1,31,143 ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಮರು ವಿದ್ಯುತ್ ಕಡೆ ಹೆಜ್ಜೆಯನ್ನು ಇಡಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಿಎಂ ಕುಸಮ್ ಯೋಜನೆಯಡಿ ರೈತರ ಪಂಪಸೆಟ್ ಗಳಿಗೆ ಕೇಂದ್ರ ಸರ್ಕಾರದಿಂದ 7.5 ಹೆಚ್ ಪಿ ಸಾಮಾರ್ಥ್ಯದ ಸೌರ ಪಂಪಸೆಟ್ ಗೆ ಶೇ.10 ರಷ್ಟು ಕೇಂದ್ರ ಸಹಾಯಧನ ಒದಗಿಸಲಿದೆ. ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದ ರೈತ ಫಲಾನುಭವಿಗಳಿಗೆ ಶೇ.30 ರಷ್ಟು ಹಾಗೂ ಪರಿಶಿಷ್ಟ ಜಾತಿ/ಪಂಗಡ ವರ್ಗದ ಫಲಾನುಭವಿಯ ಪಂಪಸೆಟ್‌ಗೆ ಶೇ.50 ರಷ್ಟು ರಾಜ್ಯದಿಂದ ಸಹಾಯಧನ ಒದಗಿಸಲಾಗುವುದು.  ಇನ್ನುಳಿದ ಹಣ ರೈತ ಫಲಾನುಭವಿಗಳಿಂದ ಭರಿಸಿ ಯೋಜನೆಯನ್ನು ಕೈಡಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ರಾಜ್ಯದ ಬೆಸ್ಕಾಂ, ಹೆಸ್ಕಾಂ, ಫೆಸ್ಟ್‌ ವಿದ್ಯುತ್ ಸರಬರಾಜು ಕಂಪನಿಗಳಿಗೆ ಒಟ್ಟು 3,37,331 ಕೃಷಿ ಪಂಪ್‌ಸೆಟ್‌ಗಳನ್ನು ಹಂಚಿಕೆ ಮಾಡಲಾಗಿದೆ.ರಾಜ್ಯದಲ್ಲಿ 1302 ಮನಾ ಸಾಮರ್ಥ್ಯದ ಸೋಲಾರ್ ಘಟಕ ಅನುಷ್ಟಾನಗೊಳಿಸಲಾಗುವುದು ಎಂದು ತಿಳಿಸಿದರು.

ನಿಗದಿತ ಅವಧಿಯಲ್ಲಿ ಬಿಲ್ ಕಟ್ಟದಿದ್ದರೆ ಪವರ್ ಕಟ್ :

ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿ ಕಡುಬಡವರಿಗೆ 40 ಯುನಿಟ್ ವರೆಗೆ ಉಚಿತವಾಗಿ ನೀಡಲಾಗುತ್ತಿದೆ. 40 ಯುನಿಟ್ ನಂತರ ಆಗುವ ಬಿಲ್‌ನ್ನು ಭರಿಸಲು ಹಿಂದೇಟು ಹಾಕಿದರೆ ಅಂತಹವರ ಮನೆಯ ಪದ‌ ಕಟ್ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು. ಬಿಜೆಪಿಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಚಿತ ವಿದ್ಯುತ್‌ ನೀಡುವ ಭರಾಟೆಯಲ್ಲಿ ಹೆಸ್ಕಾಂ, ಕೆಪಿಟಿಸಿಎಲ್ ಹಾಗೂ ಇನ್ನಿತರ ಕಂಪನಿಯನ್ನು ದಿವಾಳಿತನದತ್ತ ಕೊಂಡೊಯ್ಯಲು ಸಾಧ್ಯವಿಲ್ಲ.

ವಿದ್ಯುತ್ ಕಂಪನಿಗಳನ್ನು ಸುಸ್ತಿರಗೊಳಿಸಲು ಸಹಕಾರ ನೀಡಬೇಕಾಗಿದೆ ಎಂದರು. ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಲ್ಲಿ  ರಾಜ್ಯದ 26 ಲಕ್ಷ 8 ಸಾವಿರ ಫಲಾನುಭವಿಗಳು ಇದ್ದಾರೆ. ಉಚಿತವಾಗಿ ಕೃಷಿ ಪಂಪಸೆಟ್‌ಗಳಿಗೆ ವಿದ್ಯುತ ಪಡೆಯುವ ರೈತರ ಸಂಖ್ಯೆ 33 ಲಕ್ಷ 4 ಸಾವಿರ ಇದೆ, ಅಮೃತ ಯೋಜನೆಯಡಿ 75 ಯುನಿಟ್‌ವರೆಗೆ ಎಸ್ಸಿ, ಎಸ್ಟಿ ವರ್ಗದ 24 ಲಕ್ಷ ಫಲಾನುಭವಿಗಳು ವಿದ್ಯುತ್ ಪಡೆದುಕೊಳ್ಳುತ್ತಿದ್ದಾರೆ. ಬೆಸ್ಕಾಂ, ಮೆಸ್ಕಾಂ ಹೆಸ್ಕಾಂ, ಜೆಸ್ಕಾಂ, ಸೆಸ್ಕ್, ಕೆಪಿಟಿಸಿಎಲ್, ಕೆಪಿಸಿಎಲ್‌ ವಿದ್ಯುತ್‌ ಕಂಪನಿಗಳ ಒಟ್ಟು ಸಾಲ 72,114.84 ಕೋಟಿಯಷ್ಟು ಇದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago