Advertisement
ಅಂತಾರಾಷ್ಟ್ರೀಯ

ಸೌರ ವಿದ್ಯುತ್ ಉತ್ಪಾದನೆಯತ್ತ ಒಲವು | ಕಾರ್ಬನ್  ಡೈ ಆಕ್ಸೈಡ್ ತಗ್ಗಿಸುವ ಗುರಿ

Share

ಇಂಧನ ಕ್ಷೇತ್ರದಲ್ಲಿ ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ. ವಿಶೇಷವಾಗಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಪ್ರಗತಿ ಕಾಣುತ್ತಿದೆ. ಬಜೆಟ್ ನಲ್ಲಿ ಇಂಧನ ವಲಯಕ್ಕೆ ಹೆಚ್ಚು ಮಹತ್ವ ನೀಡಲಾಗಿದ್ದು, ಬಜೆಟ್ ನಲ್ಲಿ ಘೋಷಿಸಿರುವ ಹೊಸ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಸೌರ ಉತ್ಪಾದನೆಗೆ ಸರ್ಕಾರ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಇಂಧನ ಸಚಿವ ಪ್ರಲ್ಹಾದ್ ಜೋಶಿ  ಹೇಳಿದರು.

ಅಂತಾರಾಷ್ಟ್ರೀಯ ಸೌರ ಒಕ್ಕೂಟದ 7ನೇ ಅಧಿವೇಶನ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಿತು. ಇಂಧನ ಲಭ್ಯತೆ, ಭದ್ರತೆ ಮತ್ತು ಸಂಪ್ರದಾಯಿಕ ಇಂಧನಗಳ ಮೇಲೆ ಪರಿಣಾಮ ಬೀರುವ ಉಪಕ್ರಮಗಳ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದಲ್ಲದೆ, ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಸೌರ ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ಕೊಡುವ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

2030ರ ವೇಳೆಗೆ ಸೌರಶಕ್ತಿ  ಪರಿಹಾರಗಳಲ್ಲಿ  ಒಂದು ಸಾವಿರ ಶತಕೋಟಿ ಡಾಲರ್  ಹೂಡಿಕೆಯನ್ನು ಸಜ್ಜುಗೊಳಿಸುವ ಗುರಿ ಹೊಂದಿರುವ ಟುವರ್ಡ್ಸ್  ಸಾವಿರ ಕಾರ್ಯತಂತ್ರದ ಕಡೆಗೆ ಅಂತಾರಾಷ್ಟ್ರೀಯ ಸೌರ ಒಕ್ಕೂಟ  ಮಾರ್ಗದರ್ಶನ ನೀಡಿದೆ. ಒಂದು ಸಾವಿರ ದಶಲಕ್ಷ ಜನರಿಗೆ ಇಂಧನದ ಲಭ್ಯತೆ ಒದಗಿಸುವುದು, ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ  ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ ಮೆಟ್ರಿಕ್ ಟನ್  ಇಂಗಾಲದ ಡೈ ಆಕ್ಸೈಡ್  ಹೊರ ಸೂಸುವಿಕೆ ತಗ್ಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.  ಅಧಿವೇಶನದಲ್ಲಿ 120 ಸದಸ್ಯ ರಾಷ್ಟ್ರಗಳ ಇಂಧನ ಸಚಿವರು, ಇಂಧನ ವಲಯದ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಉದ್ಯಮಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

6 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

10 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

10 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

20 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago