Advertisement
ಅಂತಾರಾಷ್ಟ್ರೀಯ

ಸೌರ ವಿದ್ಯುತ್ ಉತ್ಪಾದನೆಯತ್ತ ಒಲವು | ಕಾರ್ಬನ್  ಡೈ ಆಕ್ಸೈಡ್ ತಗ್ಗಿಸುವ ಗುರಿ

Share

ಇಂಧನ ಕ್ಷೇತ್ರದಲ್ಲಿ ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ. ವಿಶೇಷವಾಗಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಪ್ರಗತಿ ಕಾಣುತ್ತಿದೆ. ಬಜೆಟ್ ನಲ್ಲಿ ಇಂಧನ ವಲಯಕ್ಕೆ ಹೆಚ್ಚು ಮಹತ್ವ ನೀಡಲಾಗಿದ್ದು, ಬಜೆಟ್ ನಲ್ಲಿ ಘೋಷಿಸಿರುವ ಹೊಸ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಸೌರ ಉತ್ಪಾದನೆಗೆ ಸರ್ಕಾರ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಇಂಧನ ಸಚಿವ ಪ್ರಲ್ಹಾದ್ ಜೋಶಿ  ಹೇಳಿದರು.

ಅಂತಾರಾಷ್ಟ್ರೀಯ ಸೌರ ಒಕ್ಕೂಟದ 7ನೇ ಅಧಿವೇಶನ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಿತು. ಇಂಧನ ಲಭ್ಯತೆ, ಭದ್ರತೆ ಮತ್ತು ಸಂಪ್ರದಾಯಿಕ ಇಂಧನಗಳ ಮೇಲೆ ಪರಿಣಾಮ ಬೀರುವ ಉಪಕ್ರಮಗಳ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದಲ್ಲದೆ, ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಸೌರ ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ಕೊಡುವ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

2030ರ ವೇಳೆಗೆ ಸೌರಶಕ್ತಿ  ಪರಿಹಾರಗಳಲ್ಲಿ  ಒಂದು ಸಾವಿರ ಶತಕೋಟಿ ಡಾಲರ್  ಹೂಡಿಕೆಯನ್ನು ಸಜ್ಜುಗೊಳಿಸುವ ಗುರಿ ಹೊಂದಿರುವ ಟುವರ್ಡ್ಸ್  ಸಾವಿರ ಕಾರ್ಯತಂತ್ರದ ಕಡೆಗೆ ಅಂತಾರಾಷ್ಟ್ರೀಯ ಸೌರ ಒಕ್ಕೂಟ  ಮಾರ್ಗದರ್ಶನ ನೀಡಿದೆ. ಒಂದು ಸಾವಿರ ದಶಲಕ್ಷ ಜನರಿಗೆ ಇಂಧನದ ಲಭ್ಯತೆ ಒದಗಿಸುವುದು, ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ  ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ ಮೆಟ್ರಿಕ್ ಟನ್  ಇಂಗಾಲದ ಡೈ ಆಕ್ಸೈಡ್  ಹೊರ ಸೂಸುವಿಕೆ ತಗ್ಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.  ಅಧಿವೇಶನದಲ್ಲಿ 120 ಸದಸ್ಯ ರಾಷ್ಟ್ರಗಳ ಇಂಧನ ಸಚಿವರು, ಇಂಧನ ವಲಯದ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಉದ್ಯಮಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

5 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

12 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

12 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

20 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

22 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago