ದೇಶದಲ್ಲಿ ಇನ್ನು ಮುಂದೆ ಪ್ರಯಾಣಿಕ ಕಾರುಗಳಲ್ಲಿ ಆರು ಏರ್ ಬ್ಯಾಗ್ಗಳನ್ನು ಕಡ್ಡಾಯಗೊಳಿಸುವ ಕರಡು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅಕ್ಟೋಬರ್ 1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಕರಡು ನಿಯಮಗಳು ರಸ್ತೆ ಸುರಕ್ಷತಾ ಕ್ರಮಗಳ ಸರಣಿಯ ಭಾಗವಾಗಿದ್ದು, ಅಂತಿಮ ತೀರ್ಮಾನ ಹೊರ ಬೀಳಬೇಕಿದೆ.
ಆರು ಏರ್ ಬ್ಯಾಗ್ ರಚನೆಗೆ ಈಗಾಗಲೇ ಹೆಣಗಾಡುತ್ತಿರುವ ಕಂಪನಿಗಳಿಗೆ ಈ ನಿಯಮ ಇನ್ನಷ್ಟು ಒತ್ತಡವನ್ನು ಉಂಟು ಮಾಡಿದೆ. ಪ್ರಯಾಣಿಕ ಕಾರುಗಳಲ್ಲಿ ಆರು ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವ ಪ್ಲಾನ್ ಬಗ್ಗೆ ಮಾರುತಿ ಸುಜುಕಿ ಕಳವಳ ವ್ಯಕ್ತಪಡಿಸಿದ್ದು ಸಂಭಾವ್ಯ ಖರೀದಿದಾರರು ದರ ದುಬಾರಿಯಾಗುವ ಕಾರಣ ಖರೀದಿಯಿಂದ ದೂರವಾಗಬಹುದು, ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಮಾರುತಿ ಸುಜುಕಿ ಅಧ್ಯಕ್ಷ ಆರ್.ಸಿ. ಭಾರ್ಗವ ತಿಳಿಸಿದ್ದಾರೆ.
ಎಲ್ಲಾ ಕಾರುಗಳಲ್ಲಿ ಚಾಲಕ ಮತ್ತು ಮುಂಭಾಗದ ಪ್ರಯಾಣಿಕರ ಸೀಟಿಗೆ ಏರ್ಬ್ಯಾಗ್ ಕಡ್ಡಾಯವಾಗಿದೆ. ಇನ್ನೂ ನಾಲ್ಕು ಏರ್ಬ್ಯಾಗ್ಗಳನ್ನು ಸೇರಿಸುವುದರಿಂದ ವೆಚ್ಚವು 17,600 ರೂ. ನಷ್ಟು ಹೆಚ್ಚಾಗುತ್ತದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…