Advertisement
ಸುದ್ದಿಗಳು

ಅ.1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಏರ್ ಬ್ಯಾಗ್‌ ಕಡ್ಡಾಯ | 6 ಏರ್ ಬ್ಯಾಗ್‌ ಕಡ್ಡಾಯದ ಕರಡು ಪ್ರಸ್ತಾವನೆ |

Share

ದೇಶದಲ್ಲಿ ಇನ್ನು ಮುಂದೆ ಪ್ರಯಾಣಿಕ ಕಾರುಗಳಲ್ಲಿ ಆರು ಏರ್ ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅಕ್ಟೋಬರ್ 1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಕರಡು ನಿಯಮಗಳು ರಸ್ತೆ ಸುರಕ್ಷತಾ ಕ್ರಮಗಳ ಸರಣಿಯ ಭಾಗವಾಗಿದ್ದು, ಅಂತಿಮ‌ ತೀರ್ಮಾನ‌ ಹೊರ ಬೀಳಬೇಕಿದೆ.

ಆರು ಏರ್‌ ಬ್ಯಾಗ್‌ ರಚನೆಗೆ ಈಗಾಗಲೇ ಹೆಣಗಾಡುತ್ತಿರುವ ಕಂಪನಿಗಳಿಗೆ ಈ ನಿಯಮ ಇನ್ನಷ್ಟು ಒತ್ತಡವನ್ನು ಉಂಟು ಮಾಡಿದೆ. ಪ್ರಯಾಣಿಕ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಪ್ಲಾನ್ ಬಗ್ಗೆ ಮಾರುತಿ ಸುಜುಕಿ ಕಳವಳ ವ್ಯಕ್ತಪಡಿಸಿದ್ದು ಸಂಭಾವ್ಯ ಖರೀದಿದಾರರು ದರ ದುಬಾರಿಯಾಗುವ ಕಾರಣ ಖರೀದಿಯಿಂದ ದೂರವಾಗಬಹುದು‌, ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಮಾರುತಿ ಸುಜುಕಿ ಅಧ್ಯಕ್ಷ ಆರ್‌.ಸಿ. ಭಾರ್ಗವ ತಿಳಿಸಿದ್ದಾರೆ.

ಎಲ್ಲಾ ಕಾರುಗಳಲ್ಲಿ ಚಾಲಕ ಮತ್ತು ಮುಂಭಾಗದ ಪ್ರಯಾಣಿಕರ ಸೀಟಿಗೆ ಏರ್‌ಬ್ಯಾಗ್‌ ಕಡ್ಡಾಯವಾಗಿದೆ.‌ ಇನ್ನೂ ನಾಲ್ಕು ಏರ್‌ಬ್ಯಾಗ್‌ಗಳನ್ನು ಸೇರಿಸುವುದರಿಂದ ವೆಚ್ಚವು 17,600 ರೂ. ನಷ್ಟು ಹೆಚ್ಚಾಗುತ್ತದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

8 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

10 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

16 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

17 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago