ಶುಕ್ರವಾರ ತಡ ರಾತ್ರಿ 8.30ರ ಸುಮಾರಿಗೆ ಐಎಎಫ್ ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್ನ ಇಂಡೋ-ಪಾಕ್ ಗಡಿ ಸಮೀಪದಲ್ಲಿ ಪತನಗೊಂಡಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ಹೇಳಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. ವಾಯುಸೇನೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶವನ್ನು ನೀಡಲಾಗಿದೆ.
ವಿಮಾನ ಅಪಘಾತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ಐಎಎಫ್ ತಿಳಿಸಿದೆ ಮತ್ತು ನಾವೆಲ್ಲರೂ ಕುಟುಂಬದೊಂದಿದೆ ದೃಢವಾಗಿ ನಿಂತಿದ್ದೇವೆ ಎಂದು ಐಎಎಫ್ ಟ್ವೀಟ್ ಮಾಡಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…