Advertisement
Opinion

ಪ್ರಾಣಕ್ಕೆ ಕುತ್ತು ತರುತ್ತಿರುವ ವಾಯು ಮಾಲಿನ್ಯ | 2021ರಲ್ಲಿ ವಾಯುಮಾಲಿನ್ಯದಿಂದ ಭಾರತದಲ್ಲಿ 21 ಲಕ್ಷ ಜನರ ಸಾವು..! | ಹೆಲ್ತ್ ಎಫೆಕ್ಟ್ಸ್ ಇನ್ ಸ್ಟಿಟ್ಯೂಟ್ ವರದಿ |

Share

ವಾಯುಮಾಲಿನ್ಯದಿಂದ(Air Pollution) 2021ರಲ್ಲಿ ಭಾರತ(India) ಮತ್ತು ಚೀನಾಗಳಲ್ಲಿ(China) ಕ್ರಮವಾಗಿ 21 ಲಕ್ಷ ಮತ್ತು 23 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಇತ್ತೀಚೆಗೆ ಬಿಡುಗಡೆಯಾದ ವರದಿ(Report) ತಿಳಿಸಿದೆ. ವಿಶ್ವಾದ್ಯಂತ 2021ರಲ್ಲಿ ವಾಯುಮಾಲಿನ್ಯದಿಂದ 8.1 ಮಿಲಿಯನ್ ಜನ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ. ಯುನಿಸೆಫ್(UNISEF) ಸಹಭಾಗಿತ್ವದಲ್ಲಿ ಯುಎಸ್(US) ಮೂಲದ ಸ್ವತಂತ್ರ ಸಂಶೋಧನಾ ಸಂಸ್ಥೆಯಾದ ಹೆಲ್ತ್ ಎಫೆಕ್ಟ್ಸ್ ಇನ್ ಸ್ಟಿಟ್ಯೂಟ್ (HEI) ಪ್ರಕಟಿಸಿದ ವರದಿಯಲ್ಲಿ, ವಾಯುಮಾಲಿನ್ಯವು 2021 ರಲ್ಲಿ ಭಾರತದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 1,69,400 ಮಕ್ಕಳ ಸಾವಿಗೆ(Children death) ಕಾರಣವಾಗಿದೆ ಎಂದು ಹೇಳಿದೆ.

1,14,100 ಮಕ್ಕಳ ಸಾವಿನೊಂದಿಗೆ ನೈಜೀರಿಯಾ ನಂತರದ ಸ್ಥಾನದಲ್ಲಿದೆ. ಹಾಗೆಯೇ ಪಾಕಿಸ್ತಾನದಲ್ಲಿ 68,100, ಇಥಿಯೋಪಿಯಾದಲ್ಲಿ 31,100 ಮತ್ತು ಬಾಂಗ್ಲಾದೇಶದಲ್ಲಿ 19,100 ಮಕ್ಕಳು ವಾಯುಮಾಲಿನ್ಯಕ್ಕೆ ಬಲಿಯಾಗಿವೆ. ದಕ್ಷಿಣ ಏಷ್ಯಾದಲ್ಲಿನ ಸಾವುಗಳಿಗೆ ವಾಯುಮಾಲಿನ್ಯವು ಪ್ರಮುಖ ಅಪಾಯಕಾರಿ ಅಂಶವಾಗಿದೆ. ಅಧಿಕ ರಕ್ತದೊತ್ತಡ, ಆಹಾರ ಶೈಲಿ ಮತ್ತು ತಂಬಾಕಿನಿಂದ ಸಂಭವಿಸುವ ಸಾವುಗಳು ನಂತರದ ಸ್ಥಾನದಲ್ಲಿವೆ ಎಂದು ವರದಿ ಹೇಳಿದೆ.

“2021 ರಲ್ಲಿ ವಾಯುಮಾಲಿನ್ಯದಿಂದ ಸಂಭವಿಸಿದ ಸಾವುಗಳ ಸಂಖ್ಯೆ ಈ ಹಿಂದಿನ ಯಾವುದೇ ವರ್ಷಕ್ಕಿಂತ ಹೆಚ್ಚಾಗಿದೆ. ತಲಾ 1 ಬಿಲಿಯನ್ ಜನಸಂಖ್ಯೆಯ ಭಾರತ ಹಾಗೂ ಚೀನಾಗಳಲ್ಲಿ ವಾಯುಮಾಲಿನ್ಯದಿಂದ ಕ್ರಮವಾಗಿ 2.1 ಮಿಲಿಯನ್ ಮತ್ತು 2.3 ಮಿಲಿಯನ್ ಸಾವು ಸಂಭವಿಸಿವೆ. ಇದು ಒಟ್ಟು ಜಾಗತಿಕ ವಾಯುಮಾಲಿನ್ಯದ ಕಾರಣದಿಂದ ಉಂಟಾದ ಸಾವಿನ ಶೇಕಡಾ 54 ರಷ್ಟಿದೆ.” ಎಂದು ವರದಿ ತಿಳಿಸಿದೆ.

ವಾಯುಮಾಲಿನ್ಯದಿಂದ ಹೆಚ್ಚು ಬಾಧೆಗೊಳಗಾದ ಇತರ ದೇಶಗಳು ಹೀಗಿವೆ: ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನ (2,56,000 ಸಾವುಗಳು), ಬಾಂಗ್ಲಾದೇಶ (2,36,300) ಮತ್ತು ಮ್ಯಾನ್ಮಾರ್ (1,01,600 ಸಾವುಗಳು). ಆಗ್ನೇಯ ಏಷ್ಯಾದಲ್ಲಿ ಇಂಡೋನೇಷ್ಯಾ (2,21,600 ಸಾವುಗಳು), ವಿಯೆಟ್ನಾಂ (99,700 ಸಾವುಗಳು) ಮತ್ತು ಫಿಲಿಪೈನ್ಸ್ (98,209); ಮತ್ತು ಆಫ್ರಿಕಾದಲ್ಲಿ ನೈಜೀರಿಯಾ (2,06,700 ಸಾವುಗಳು) ಮತ್ತು ಈಜಿಪ್ಟ್ (1,16,500 ಸಾವುಗಳು).

ಒಟ್ಟಾರೆಯಾಗಿ, ಪಿಎಂ 2.5 ಮತ್ತು ಓಝೋನ್ ನಿಂದ ಉಂಟಾಗುವ ವಾಯುಮಾಲಿನ್ಯದಿಂದ 2021 ರಲ್ಲಿ 8.1 ಮಿಲಿಯನ್ ಸಾವು ಸಂಭವಿಸಿವೆ ಎಂದು ಅಂದಾಜಿಸಲಾಗಿದೆ. ಇದು ಒಟ್ಟು ಜಾಗತಿಕ ಸಾವುಗಳ ಶೇಕಡಾ 12 ರಷ್ಟಿದೆ. ಈ ಜಾಗತಿಕ ವಾಯುಮಾಲಿನ್ಯದ ಸಾವುಗಳಲ್ಲಿ 90 ಪ್ರತಿಶತಕ್ಕೂ ಹೆಚ್ಚು ಅಂದರೆ 7.8 ಮಿಲಿಯನ್ ಜನರು ಪಿಎಂ 2.5 ವಾಯುಮಾಲಿನ್ಯದ ಕಾರಣದಿಂದ ಸಾವಿಗೀಡಾಗಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

5 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

15 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

16 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

20 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

21 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

1 day ago