ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 1.29 ಲಕ್ಷ ಧ್ವನಿವರ್ಧಕಗಳನ್ನು ತೆಗೆಯಲಾಗಿದೆ. ಕೆಲವುಗಳ ಡೆಸಿಬಲ್ ಮಟ್ಟವನ್ನು ಕಡಿಮೆ ಮಾಡಲಾಗಿದೆ. ಈ ಪೈಕಿ 71,114 ಧ್ವನಿವರ್ಧಕಗಳನ್ನು ವಿವಿಧ ಪೂಜಾ ಸ್ಥಳಗಳಿಂದಲೇ ತೆಗೆದುಹಾಕಲಾಗಿದೆ. ತೆಗೆದ ಧ್ವನಿವರ್ಧಕಗಳನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಶಾಲೆಗಳಿಗೆ ಸರ್ಕಾರವು ಹಸ್ತಾಂತರಿಸಿದೆ.
ಶಾಲೆಗಳ ಬೆಳಗಿನ ಸಭೆಗಾಗಿ 4371 ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ನೀಡಲಾಯಿತು. ಉತ್ತರ ಪ್ರದೇಶದ ಗೃಹ ಇಲಾಖೆಯು ಏಪ್ರಿಲ್ 23 ರಂದು ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಆದೇಶವನ್ನು ನೀಡಿತ್ತು. ಸಿಎಂ ನಿರ್ದೇಶನಗಳು ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಆಧರಿಸಿತ್ತು. ಈ ನೆಲೆಯಲ್ಲಿ ವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರೊಂದಿಗೆ ಸಂವಾದ ಹಾಗೂ ಧ್ವನಿವರ್ಧಕಗಳ ಮೂಲಕ ಶಬ್ದ ಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಇಡೀ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಸಲಾಯಿತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಧಾರ್ಮಿಕ ಮುಖಂಡರು ಧ್ವನಿವರ್ಧಕಗಳನ್ನು ತೆಗೆಸುವಲ್ಲಿ ಸಹಕಾರ ನೀಡಿದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…