Advertisement
Political mirror

ಧಾರ್ಮಿಕ ಸ್ಥಳಗಳಿಂದ 71,000 ಧ್ವನಿವರ್ಧಕಗಳಿಗೆ ಕತ್ತರಿ ಹಾಕಿದ ಉತ್ತರ ಪ್ರದೇಶ ಸರ್ಕಾರ…! |

Share

ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 1.29 ಲಕ್ಷ ಧ್ವನಿವರ್ಧಕಗಳನ್ನು ತೆಗೆಯಲಾಗಿದೆ. ಕೆಲವುಗಳ ಡೆಸಿಬಲ್ ಮಟ್ಟವನ್ನು ಕಡಿಮೆ ಮಾಡಲಾಗಿದೆ. ಈ ಪೈಕಿ 71,114 ಧ್ವನಿವರ್ಧಕಗಳನ್ನು ವಿವಿಧ ಪೂಜಾ ಸ್ಥಳಗಳಿಂದಲೇ ತೆಗೆದುಹಾಕಲಾಗಿದೆ. ತೆಗೆದ ಧ್ವನಿವರ್ಧಕಗಳನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಶಾಲೆಗಳಿಗೆ ಸರ್ಕಾರವು ಹಸ್ತಾಂತರಿಸಿದೆ. 

ಶಾಲೆಗಳ ಬೆಳಗಿನ ಸಭೆಗಾಗಿ 4371 ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ನೀಡಲಾಯಿತು. ಉತ್ತರ ಪ್ರದೇಶದ ಗೃಹ ಇಲಾಖೆಯು ಏಪ್ರಿಲ್ 23 ರಂದು ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಆದೇಶವನ್ನು ನೀಡಿತ್ತು. ಸಿಎಂ ನಿರ್ದೇಶನಗಳು ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು  ಆಧರಿಸಿತ್ತು. ಈ ನೆಲೆಯಲ್ಲಿ ವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರೊಂದಿಗೆ ಸಂವಾದ ಹಾಗೂ ಧ್ವನಿವರ್ಧಕಗಳ ಮೂಲಕ ಶಬ್ದ ಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಇಡೀ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಸಲಾಯಿತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಧಾರ್ಮಿಕ ಮುಖಂಡರು ಧ್ವನಿವರ್ಧಕಗಳನ್ನು ತೆಗೆಸುವಲ್ಲಿ ಸಹಕಾರ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

27 seconds ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

7 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

9 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

16 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

24 hours ago