ಕುಕ್ಕೆ ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಪ್ರಸ್ತುತ ಡೆಹ್ರಾಡೂನ್ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್ಸ್ಟಿಟ್ಯೂಟ್ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಅಜಿತೇಶ್ ಇಂಡಿಯನ್ ಆರ್ಮಿಯ ಆಫೀಸರ್ ಟ್ರೈನಿಂಗ್ ಅಕಾಡೆಮಿ ಚೆನ್ನೈಯಲ್ಲಿ ಒಂದು ವರ್ಷ ಕಾಲ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಪೆರ್ಮುಖ ಶ್ರೀಕೃಷ್ಣ ಶರ್ಮ ಹಾಗೂ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಇವರ ಪುತ್ರ. ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪೂರೈಸಿ ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…