ಕುಕ್ಕೆ ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಪ್ರಸ್ತುತ ಡೆಹ್ರಾಡೂನ್ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್ಸ್ಟಿಟ್ಯೂಟ್ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಅಜಿತೇಶ್ ಇಂಡಿಯನ್ ಆರ್ಮಿಯ ಆಫೀಸರ್ ಟ್ರೈನಿಂಗ್ ಅಕಾಡೆಮಿ ಚೆನ್ನೈಯಲ್ಲಿ ಒಂದು ವರ್ಷ ಕಾಲ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಪೆರ್ಮುಖ ಶ್ರೀಕೃಷ್ಣ ಶರ್ಮ ಹಾಗೂ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಇವರ ಪುತ್ರ. ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪೂರೈಸಿ ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…