ಕುಕ್ಕೆ ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಪ್ರಸ್ತುತ ಡೆಹ್ರಾಡೂನ್ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್ಸ್ಟಿಟ್ಯೂಟ್ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಅಜಿತೇಶ್ ಇಂಡಿಯನ್ ಆರ್ಮಿಯ ಆಫೀಸರ್ ಟ್ರೈನಿಂಗ್ ಅಕಾಡೆಮಿ ಚೆನ್ನೈಯಲ್ಲಿ ಒಂದು ವರ್ಷ ಕಾಲ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಪೆರ್ಮುಖ ಶ್ರೀಕೃಷ್ಣ ಶರ್ಮ ಹಾಗೂ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಇವರ ಪುತ್ರ. ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪೂರೈಸಿ ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…