ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

March 23, 2026
10:18 PM
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ ಆವಿಷ್ಕಾರ ಕಲ್ಪನೆಗಳಿಗಾಗಿ ಅವರಿಗೆ ತಲಾ ₹10,000 ಪ್ರೋತ್ಸಾಹಧನ ಲಭಿಸಿದೆ.

ಸರ್ಕಾರಿ ಪ್ರೌಢಶಾಲೆ ಅಜ್ಜಾವರದ ಇಬ್ಬರು ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ INSPIRE Award ಯೋಜನೆಗೆ ಆಯ್ಕೆಯಾಗಿದ್ದಾರೆ.

ಈ ಯೋಜನೆಯಡಿ ಮಂಡೆಕೊಲು ಮನೆಯ ಜನಾರ್ಧನ ಹಾಗೂ ಧರ್ಮಾವತಿ ದಂಪತಿಯ ಪುತ್ರಿ, 9ನೇ ತರಗತಿಯ ಮೋಕ್ಷಿತಾ ಎಂ.ಜೆ ಮತ್ತು ಅಜ್ಜಾವರ ಗ್ರಾಮದ ನಾರಾಲು ಮನೆಯ ಪರಮೇಶ್ವರ ಹಾಗೂ ರಜನಿ ದಂಪತಿಯ ಪುತ್ರ, 9ನೇ ತರಗತಿಯ ಗುರುದೀಪ್ ಎನ್ ಅವರು ತಮ್ಮ ವೈಜ್ಞಾನಿಕ ಆಲೋಚನೆಗಳು ಮತ್ತು ನವೀನ ಆವಿಷ್ಕಾರ ಕಲ್ಪನೆಗಳನ್ನು ಪ್ರಸ್ತುತಪಡಿಸಲು ಆಯ್ಕೆಯಾಗಿದ್ದಾರೆ. ಗುರುದೀಪ್ ಎನ್ ಅವರು ವಾಟರ್ ಸ್ಪ್ರೇ ಮೆಷಿನ್ ಹಾಗೂ ಮೋಕ್ಷಿತಾ ಎಂ ಜೆ ಅವರು ಭೂಕಂಪ ಪತ್ತೆ ಹೆಚ್ಚುವ ಯಂತ್ರದ ಮಾದರಿಯನ್ನು ತಯಾರಿಸಿದ್ದರು.

ತಲಾ ₹10,000 ಪ್ರೋತ್ಸಾಹ ಧನ :  INSPIRE Award-MANAK ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಮ್ಮ ವೈಜ್ಞಾನಿಕ ಮಾದರಿಗಳನ್ನು ಅಭಿವೃದ್ಧಿಪಡಿಸಲು ತಲಾ ₹10,000 ನಗದು ಬಹುಮಾನ ನೀಡಲಾಗುತ್ತದೆ. ಈ ಪ್ರೋತ್ಸಾಹಧನವು ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಂಶೋಧನಾ ಮನೋಭಾವವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ.

ವಿಜ್ಞಾನ ಶಿಕ್ಷಕ ಚಂದ್ರಶೇಖರ ಭಟ್ ಎ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಮಾದರಿಗಳ ಪ್ರಸ್ತಾವನೆಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಆಸಕ್ತಿ ಹೆಚ್ಚಳ :  ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ವಿಜ್ಞಾನ ಯೋಜನೆಗೆ ಆಯ್ಕೆಯಾಗಿರುವುದು ಶಾಲೆಗೆ ಹಾಗೂ ಸ್ಥಳೀಯ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ. ಇದು ಇತರ ವಿದ್ಯಾರ್ಥಿಗಳಿಗೂ ವಿಜ್ಞಾನ ಮತ್ತು ನವೀನತೆಯ ಕಡೆ ಆಸಕ್ತಿ ಮೂಡಿಸುವಲ್ಲಿ ಪ್ರೇರಣೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Two Class 9 students from Government High School, Ajjavara — Mokshitha M.J and Gurudeep N — have been selected for the prestigious INSPIRE Award-MANAK by the Department of Science and Technology, Government of India. They have received ₹10,000 each to develop and present their innovative science ideas.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror