ಚೀನಾದಲ್ಲಿ ನಡೆಯುವ ವಿಚಾರ ಸಂಕಿರಣಕ್ಕೆ ಸುಳ್ಯದ ಅಕ್ಷರ ದಾಮ್ಲೆಆಯ್ಕೆ | ಗ್ರಾಮೀಣ ಭಾಗಕ್ಕೊಂದು ಗರಿ |

June 5, 2024
10:30 AM
ಚೀನಾ ಸರಕಾರದ ವಾಣಿಜ್ಯ ಸಚಿವಾಲಯವು ಏರ್ಪಡಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಸುಳ್ಯದ ಅಕ್ಷರ ದಾಮ್ಲೆ ಅವರು ಆಮಂತ್ರಿತರಾಗಿದ್ದಾರೆ .

ಶರೀರದ ನರಗಳ ಅಸ್ವಸ್ಥತೆಗಳ ಹಾಗೂ ಮಾನಸಿಕ ಅಸೌಖ್ಯದ ನಿಯಂತ್ರಣದ ಬಗ್ಗೆ ಇದೇ ಜೂನ್ 12ರಿಂದ ಹತ್ತು ದಿನಗಳ ಕಾಲ ನಡೆಯುವ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಅರ್ಹರ ಆಯ್ಕೆಗಾಗಿ ಸಲ್ಲಿಸಲ್ಪಟ್ಟ ಪ್ರೊಫೈಲ್ ಗಳಲ್ಲಿ ಭಾರತದಿಂದ ಅಕ್ಷರ ದಾಮ್ಲೆಯವರು ಪರಿಗಣಿಸಲ್ಪಟ್ಟಿದ್ದಾರೆ .ಚೀನಾ ಸರಕಾರದ ವಾಣಿಜ್ಯ ಸಚಿವಾಲಯವು ಏರ್ಪಡಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಆಮಂತ್ರಿತರಾಗಿದ್ದಾರೆ .

ಅವರು ಬೆಂಗಳೂರಿನ ಕೊಳೆಗೇರಿಗಳಲ್ಲಿ ಮಾನಸಿಕ ಅಸ್ವಸ್ಥತೆಯ ನಿವಾರಣೆಗಾಗಿ ಕೈಗೊಂಡ ಸೇವಾ ಕಾರ್ಯಗಳು ಹಾಗೂ 2020ರಲ್ಲಿ ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದ್ದು , ಅವರ ಇಂಗ್ಲಿಷ್ ಲೇಖನಗಳು ಹಾಗೂ ಉಪನ್ಯಾಸಗಳ ಕೊಡುಗೆಗಳನ್ನು ಆಯ್ಕೆ ಸಮಿತಿಯು ಪರಿಗಣಿಸಿದೆ. ಇದು ಅಂತಾರಾಷ್ಟ್ರೀಯ ಸಮ್ಮೇಳನವಾದುದರಿಂದ ಭಾಗವಹಿಸುವವರಿಗೆ ಇಂಗ್ಲಿಷ್ ಜ್ಞಾನ ಇರಲೇಬೇಕೆಂಬ ಕಂಡೀಶನ್ ಇದೆ. ಅಕ್ಷರ ಅವರಿಗೆ ಸ್ನೇಹ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಣದ ಗಟ್ಟಿ ತಳಹದಿ ಸಿಕ್ಕಿತ್ತು.ಮಾನಸಿಕ ಸಮಸ್ಯೆಗಳ ನಿವಾರಣೆಯ ಬಗ್ಗೆ ಯೂಟ್ಯೂಬ್ ನಲ್ಲಿರುವ ಅವರ ಇಂಗ್ಲಿಷ್ ಭಾಷಣಗಳು ಈ ವಿಚಾರ ಸಂಕಿರಣಕ್ಕೆ ಆಯ್ಕೆಯಾಗಲು ಉಪಯುಕ್ತವಾದವು . ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಮಾನಸಿಕ ಚಿಕಿತ್ಸೆಯ ಮನೋ ಸಂವಾದ ಸಂಸ್ಥೆಯನ್ನು ಸ್ಥಾಪಿಸಿರುವ ಅಕ್ಷರ ಅವರ ಆತಿಥ್ಯವನ್ನು ಹಾಗೂ ಪ್ರಯಾಣ ವೆಚ್ಚಗಳನ್ನು ಚೀನಾ ಸರಕಾರವೇ ಭರಿಸಲಿದೆ .

Advertisement

ಚೀನಾದ ರಾಜಧಾನಿ ಬೀಜಿಂಗ್‍ಗೆ ಚೀನಾದ ರಾಜಧಾನಿ ಬೀಜಿಂಗ್ ಗೆ ಸಮೀಪವಿರುವ ಅಕಾಡೆಮಿ Academy for International Business Offic ಕೇಂದ್ರದಲ್ಲಿ ಜರಗಲಿರುವ ಈ ವಿಚಾರ ಸಂಕಿರಣದಲ್ಲಿ ವಿವಿಧ ದೇಶಗಳ ಮನಶ್ಯಾಸ್ತ್ರಜ್ಞರು ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror