ಶರೀರದ ನರಗಳ ಅಸ್ವಸ್ಥತೆಗಳ ಹಾಗೂ ಮಾನಸಿಕ ಅಸೌಖ್ಯದ ನಿಯಂತ್ರಣದ ಬಗ್ಗೆ ಇದೇ ಜೂನ್ 12ರಿಂದ ಹತ್ತು ದಿನಗಳ ಕಾಲ ನಡೆಯುವ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಅರ್ಹರ ಆಯ್ಕೆಗಾಗಿ ಸಲ್ಲಿಸಲ್ಪಟ್ಟ ಪ್ರೊಫೈಲ್ ಗಳಲ್ಲಿ ಭಾರತದಿಂದ ಅಕ್ಷರ ದಾಮ್ಲೆಯವರು ಪರಿಗಣಿಸಲ್ಪಟ್ಟಿದ್ದಾರೆ .ಚೀನಾ ಸರಕಾರದ ವಾಣಿಜ್ಯ ಸಚಿವಾಲಯವು ಏರ್ಪಡಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಆಮಂತ್ರಿತರಾಗಿದ್ದಾರೆ .
ಅವರು ಬೆಂಗಳೂರಿನ ಕೊಳೆಗೇರಿಗಳಲ್ಲಿ ಮಾನಸಿಕ ಅಸ್ವಸ್ಥತೆಯ ನಿವಾರಣೆಗಾಗಿ ಕೈಗೊಂಡ ಸೇವಾ ಕಾರ್ಯಗಳು ಹಾಗೂ 2020ರಲ್ಲಿ ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದ್ದು , ಅವರ ಇಂಗ್ಲಿಷ್ ಲೇಖನಗಳು ಹಾಗೂ ಉಪನ್ಯಾಸಗಳ ಕೊಡುಗೆಗಳನ್ನು ಆಯ್ಕೆ ಸಮಿತಿಯು ಪರಿಗಣಿಸಿದೆ. ಇದು ಅಂತಾರಾಷ್ಟ್ರೀಯ ಸಮ್ಮೇಳನವಾದುದರಿಂದ ಭಾಗವಹಿಸುವವರಿಗೆ ಇಂಗ್ಲಿಷ್ ಜ್ಞಾನ ಇರಲೇಬೇಕೆಂಬ ಕಂಡೀಶನ್ ಇದೆ. ಅಕ್ಷರ ಅವರಿಗೆ ಸ್ನೇಹ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಣದ ಗಟ್ಟಿ ತಳಹದಿ ಸಿಕ್ಕಿತ್ತು.ಮಾನಸಿಕ ಸಮಸ್ಯೆಗಳ ನಿವಾರಣೆಯ ಬಗ್ಗೆ ಯೂಟ್ಯೂಬ್ ನಲ್ಲಿರುವ ಅವರ ಇಂಗ್ಲಿಷ್ ಭಾಷಣಗಳು ಈ ವಿಚಾರ ಸಂಕಿರಣಕ್ಕೆ ಆಯ್ಕೆಯಾಗಲು ಉಪಯುಕ್ತವಾದವು . ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಮಾನಸಿಕ ಚಿಕಿತ್ಸೆಯ ಮನೋ ಸಂವಾದ ಸಂಸ್ಥೆಯನ್ನು ಸ್ಥಾಪಿಸಿರುವ ಅಕ್ಷರ ಅವರ ಆತಿಥ್ಯವನ್ನು ಹಾಗೂ ಪ್ರಯಾಣ ವೆಚ್ಚಗಳನ್ನು ಚೀನಾ ಸರಕಾರವೇ ಭರಿಸಲಿದೆ .
ಚೀನಾದ ರಾಜಧಾನಿ ಬೀಜಿಂಗ್ಗೆ ಚೀನಾದ ರಾಜಧಾನಿ ಬೀಜಿಂಗ್ ಗೆ ಸಮೀಪವಿರುವ ಅಕಾಡೆಮಿ Academy for International Business Offic ಕೇಂದ್ರದಲ್ಲಿ ಜರಗಲಿರುವ ಈ ವಿಚಾರ ಸಂಕಿರಣದಲ್ಲಿ ವಿವಿಧ ದೇಶಗಳ ಮನಶ್ಯಾಸ್ತ್ರಜ್ಞರು ಭಾಗವಹಿಸಲಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…