ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.
ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು ಎಂದು ಈ ಹಿಂದೆ ಆಮ್ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.
ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…