ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.
ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು ಎಂದು ಈ ಹಿಂದೆ ಆಮ್ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.
ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…