ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.
ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು ಎಂದು ಈ ಹಿಂದೆ ಆಮ್ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.
ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…