Advertisement
ಸುದ್ದಿಗಳು

ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ | ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ |

Share

7 ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ಅಂದ್ರೆ ಮಾರ್ಚ್​ 1 ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಇಂದು ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಬಜೆಟ್​ನಲ್ಲಿ 7ನೇ ವೇತನ ಆಯೋಗ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾಳೆಯಿಂದ(ಮಾ.01) ಸಾಮೂಹಿಕವಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗುತ್ತವೆ.

Advertisement
Advertisement

ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ. ಯಾವುದೇ ಸಂಧಾನಕ್ಕೆ ನಾವು ಬಗ್ಗುವುದಿಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಳೆದ 1 ವರ್ಷದ ಸಿಎಂ ವೇತನ ಪರಿಷ್ಕರಣೆ ಭರವಸೆ ನೀಡಿದ್ದರು. ಆದರೆ ಈ ತನಕ ಸಿಎಂ ಭರವಸೆ ಈಡೇರಿಲ್ಲ. ವೇತನ‌ ಆಯೋಗ ಪರಿಶೀಲನೆ ಭರವಸೆ ನೀಡಿದೆ. ಆದರೆ ಎಲ್ಲವೂ ಚರ್ಚೆ ಹಂತದಲ್ಲಿ ಇದೆ. ನಾವು ಸರ್ಕಾರಕ್ಕೆ ಪ್ರತಿಭಟನೆ ಬಗ್ಗೆ ಗಮನಕ್ಕೆ ತಂದಿದ್ದೇವೆ. ಆದರೂ ಸರ್ಕಾರ ನಮ್ಮ ಬೇಡಿಕೆ ಬಗ್ಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ನಾಳೆಯಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರು ಒಗಟ್ಟಾಗಿ ಅನಿರ್ಧಿಷ್ಟ ಅವಧಿ ಹೋರಾಟ ಮಾಡಬೇಕು. ಎಲ್ಲ ವೃಂದ ಸಂಘಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಇದನ್ನು ಮಾಡುತ್ತಿದ್ದೇವೆ. 2022 ರಲ್ಲಿ ವೇತನ ಆಯೋಗ ರಚನೆ ಮಾಡ್ತೀವಿ ಅಂತ  ಹೇಳಿ, 9 ತಿಂಗಳ ಬಳಿಕ ಆಯೋಗ ರಚನೆಯಾಗಿದೆ. ಆದ್ರೆ ಮಧ್ಯಂತರ ವರದಿ ತೆಗೆದುಕೊಂಡು ನಮಗೆ ವೇತನ ಇಂಪ್ಲಿಮೆಂಟ್ ಮಾಡಿ ಅಂತ ವಿನಂತಿ ಮಾಡಿದ್ವಿ. ಆಗಲೂ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ರು. ಆಗಲಿನಿಂದಲೂ ಬರೀ ಚರ್ಚೆಯಲ್ಲಿದೆ. ಬದಲಿಗೆ ಏನು ನಿರ್ಣಯಕ್ಕೆ ಬಂದಿಲ್ಲ. ಇಡೀ ದೇಶದಲ್ಲಿ ಕಡಿಮೆ ಕನಿಷ್ಟ ವೇತನ ಪಡೆಯುವವರು ಕರ್ನಾಟಕ ರಾಜ್ಯದವರು. ಬೇರೆ ರಾಜ್ಯಗಳಲ್ಲಿ ವೇತನ ಹೆಚ್ಚಾಗಿದೆ. ಇಂದು 39% ಹುದ್ದೆ ಖಾಲಿ ಇದೆ. ಇಷ್ಟೆಲ್ಲ ಕೆಲಸ ಮಾಡಿ ಅಭಿವೃದ್ಧಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಉಪಾಧ್ಯಕ್ಷ ರುದ್ರಪ್ಪ, ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಭಾಗಿಯಾಗಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

21 seconds ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

9 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

30 minutes ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

38 minutes ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

18 hours ago