Advertisement
ಸುದ್ದಿಗಳು

ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ | ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ |

Share

7 ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ಅಂದ್ರೆ ಮಾರ್ಚ್​ 1 ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಇಂದು ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಬಜೆಟ್​ನಲ್ಲಿ 7ನೇ ವೇತನ ಆಯೋಗ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾಳೆಯಿಂದ(ಮಾ.01) ಸಾಮೂಹಿಕವಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗುತ್ತವೆ.

Advertisement
Advertisement
Advertisement
Advertisement

ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ. ಯಾವುದೇ ಸಂಧಾನಕ್ಕೆ ನಾವು ಬಗ್ಗುವುದಿಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

ಕಳೆದ 1 ವರ್ಷದ ಸಿಎಂ ವೇತನ ಪರಿಷ್ಕರಣೆ ಭರವಸೆ ನೀಡಿದ್ದರು. ಆದರೆ ಈ ತನಕ ಸಿಎಂ ಭರವಸೆ ಈಡೇರಿಲ್ಲ. ವೇತನ‌ ಆಯೋಗ ಪರಿಶೀಲನೆ ಭರವಸೆ ನೀಡಿದೆ. ಆದರೆ ಎಲ್ಲವೂ ಚರ್ಚೆ ಹಂತದಲ್ಲಿ ಇದೆ. ನಾವು ಸರ್ಕಾರಕ್ಕೆ ಪ್ರತಿಭಟನೆ ಬಗ್ಗೆ ಗಮನಕ್ಕೆ ತಂದಿದ್ದೇವೆ. ಆದರೂ ಸರ್ಕಾರ ನಮ್ಮ ಬೇಡಿಕೆ ಬಗ್ಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ನಾಳೆಯಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರು ಒಗಟ್ಟಾಗಿ ಅನಿರ್ಧಿಷ್ಟ ಅವಧಿ ಹೋರಾಟ ಮಾಡಬೇಕು. ಎಲ್ಲ ವೃಂದ ಸಂಘಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಇದನ್ನು ಮಾಡುತ್ತಿದ್ದೇವೆ. 2022 ರಲ್ಲಿ ವೇತನ ಆಯೋಗ ರಚನೆ ಮಾಡ್ತೀವಿ ಅಂತ  ಹೇಳಿ, 9 ತಿಂಗಳ ಬಳಿಕ ಆಯೋಗ ರಚನೆಯಾಗಿದೆ. ಆದ್ರೆ ಮಧ್ಯಂತರ ವರದಿ ತೆಗೆದುಕೊಂಡು ನಮಗೆ ವೇತನ ಇಂಪ್ಲಿಮೆಂಟ್ ಮಾಡಿ ಅಂತ ವಿನಂತಿ ಮಾಡಿದ್ವಿ. ಆಗಲೂ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ರು. ಆಗಲಿನಿಂದಲೂ ಬರೀ ಚರ್ಚೆಯಲ್ಲಿದೆ. ಬದಲಿಗೆ ಏನು ನಿರ್ಣಯಕ್ಕೆ ಬಂದಿಲ್ಲ. ಇಡೀ ದೇಶದಲ್ಲಿ ಕಡಿಮೆ ಕನಿಷ್ಟ ವೇತನ ಪಡೆಯುವವರು ಕರ್ನಾಟಕ ರಾಜ್ಯದವರು. ಬೇರೆ ರಾಜ್ಯಗಳಲ್ಲಿ ವೇತನ ಹೆಚ್ಚಾಗಿದೆ. ಇಂದು 39% ಹುದ್ದೆ ಖಾಲಿ ಇದೆ. ಇಷ್ಟೆಲ್ಲ ಕೆಲಸ ಮಾಡಿ ಅಭಿವೃದ್ಧಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಉಪಾಧ್ಯಕ್ಷ ರುದ್ರಪ್ಪ, ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಭಾಗಿಯಾಗಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

10 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

10 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

10 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

10 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

17 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

18 hours ago