Advertisement
ಸುದ್ದಿಗಳು

ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ | ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ |

Share

7 ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ಅಂದ್ರೆ ಮಾರ್ಚ್​ 1 ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಇಂದು ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಬಜೆಟ್​ನಲ್ಲಿ 7ನೇ ವೇತನ ಆಯೋಗ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾಳೆಯಿಂದ(ಮಾ.01) ಸಾಮೂಹಿಕವಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗುತ್ತವೆ.

Advertisement

ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ. ಯಾವುದೇ ಸಂಧಾನಕ್ಕೆ ನಾವು ಬಗ್ಗುವುದಿಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಳೆದ 1 ವರ್ಷದ ಸಿಎಂ ವೇತನ ಪರಿಷ್ಕರಣೆ ಭರವಸೆ ನೀಡಿದ್ದರು. ಆದರೆ ಈ ತನಕ ಸಿಎಂ ಭರವಸೆ ಈಡೇರಿಲ್ಲ. ವೇತನ‌ ಆಯೋಗ ಪರಿಶೀಲನೆ ಭರವಸೆ ನೀಡಿದೆ. ಆದರೆ ಎಲ್ಲವೂ ಚರ್ಚೆ ಹಂತದಲ್ಲಿ ಇದೆ. ನಾವು ಸರ್ಕಾರಕ್ಕೆ ಪ್ರತಿಭಟನೆ ಬಗ್ಗೆ ಗಮನಕ್ಕೆ ತಂದಿದ್ದೇವೆ. ಆದರೂ ಸರ್ಕಾರ ನಮ್ಮ ಬೇಡಿಕೆ ಬಗ್ಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ನಾಳೆಯಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರು ಒಗಟ್ಟಾಗಿ ಅನಿರ್ಧಿಷ್ಟ ಅವಧಿ ಹೋರಾಟ ಮಾಡಬೇಕು. ಎಲ್ಲ ವೃಂದ ಸಂಘಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಇದನ್ನು ಮಾಡುತ್ತಿದ್ದೇವೆ. 2022 ರಲ್ಲಿ ವೇತನ ಆಯೋಗ ರಚನೆ ಮಾಡ್ತೀವಿ ಅಂತ  ಹೇಳಿ, 9 ತಿಂಗಳ ಬಳಿಕ ಆಯೋಗ ರಚನೆಯಾಗಿದೆ. ಆದ್ರೆ ಮಧ್ಯಂತರ ವರದಿ ತೆಗೆದುಕೊಂಡು ನಮಗೆ ವೇತನ ಇಂಪ್ಲಿಮೆಂಟ್ ಮಾಡಿ ಅಂತ ವಿನಂತಿ ಮಾಡಿದ್ವಿ. ಆಗಲೂ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ರು. ಆಗಲಿನಿಂದಲೂ ಬರೀ ಚರ್ಚೆಯಲ್ಲಿದೆ. ಬದಲಿಗೆ ಏನು ನಿರ್ಣಯಕ್ಕೆ ಬಂದಿಲ್ಲ. ಇಡೀ ದೇಶದಲ್ಲಿ ಕಡಿಮೆ ಕನಿಷ್ಟ ವೇತನ ಪಡೆಯುವವರು ಕರ್ನಾಟಕ ರಾಜ್ಯದವರು. ಬೇರೆ ರಾಜ್ಯಗಳಲ್ಲಿ ವೇತನ ಹೆಚ್ಚಾಗಿದೆ. ಇಂದು 39% ಹುದ್ದೆ ಖಾಲಿ ಇದೆ. ಇಷ್ಟೆಲ್ಲ ಕೆಲಸ ಮಾಡಿ ಅಭಿವೃದ್ಧಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಉಪಾಧ್ಯಕ್ಷ ರುದ್ರಪ್ಪ, ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಭಾಗಿಯಾಗಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago