ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗ ಗುರು ರಾಮದೇವ್ ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ, ಸಂಸ್ಕೃತ ಮಹತ್ವವನ್ನು ಎಲ್ಲರೂ ಅರಿಯಬೇಕು, ಪುರಾತನ ಭಾಷೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ತಿಳಿಸಿದರು.
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದ ಆಧ್ಯಾತ್ಮಿಕ ರಾಜಧಾನಿ ಎಂಬ ಹೆಗ್ಗಳಿಕೆ ಪಡೆದಿದೆ, ಶ್ರೇಷ್ಠ ಭಾಷೆಯಾದ ಸಂಸ್ಕೃತ ದೇಶದ ಎಲ್ಲ ಭಾಷೆಗಳ ತಾಯಿ ಸ್ಥಾನದಲ್ಲಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರಕೇರಿ ಮಠಾಧೀಶ ವಿದ್ಯೇಶ ತೀರ್ಥ ಸ್ವಾಮೀಜಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel