Advertisement
Opinion

ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್

Share

ಸಮಾಜವು ರಾಷ್ಟ್ರೀಯತೆಯನ್ನು ಪೋಷಿಸಿದಾಗ ಇತಿಹಾಸಗಳು ಸಮೃದ್ಧವಾಗುತ್ತವೆ. ಹಾಗೆ ಧರ್ಮದ ವಿಚಾರ ಬಂದಾಗಲು ಸಮಾಜ ಇದೇ ತಳಹದಿಯ ಮೇಲೆ ನಿಂತರೆ ದೇಶದಲ್ಲಿ ಜನ ಸಾಮರಸ್ಯದಿಂದ ಬದುಕಬಹುದು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಎಲ್ಲವೂ ಜಾತಿ, ಧರ್ಮದ ಮೇಲೆ ದೇಶ ನಡೆಯುತ್ತಿದೆ. ಎಲ್ಲದಕ್ಕೂ ಧರ್ಮವೇ ಮುಖ್ಯ. ಹಿಂದೂ, ಇಸ್ಲಾಂ ಧರ್ಮದ ಮಧ್ಯೆ ದೊಡ್ಡ ಕಂದಕವೇ ಬೆಳದಿದೆ. ಆದರೆ ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ ಮಾತು ಎಲ್ಲರೂ ಯೋಚನೆಗೆ ಹಚ್ಚುವಂತೆ ಮಾಡಿದೆ.

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್ ಅವರು, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಕಿವಿ ಮಾತು ಹೇಳಿದರು.

ಹಿಂದೂ-ಮುಸ್ಲಿಂ ಎನ್ನುವ ಬೇಧಭಾವವೇಕೆ? ಎಂದು ಆಜಾದ್ ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದರು.  ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ  ಭಾರತದ ಮಣ್ಣಿನಲ್ಲೇ ಬೆರೆಯುತ್ತಾರೆ, ಹಾಗಾಗಿ ಮುಸ್ಲಿಮರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಬೇಧಬಾವ ಏಕೆ ಎಂದರು.

ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಆಜಾದ್ ಅಬರ ಮಾತು ಎಷ್ಟು ಮಂದಿಗೆ ಇಷ್ಟವಾಗುತ್ತೊ ಇಲ್ವೋ ಗೊತ್ತಿಲ್ಲ. ಆದರೆ ನಾವು ಭಾರತೀಯರು, ನಾವೆಲ್ಲರೂ ಒಂದೇ ಎನ್ನುವ ಮಾತು ಒಪ್ಪಲೇ ಬೆಕಾದ್ದು.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

21 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago