Advertisement
Opinion

ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್

Share

ಸಮಾಜವು ರಾಷ್ಟ್ರೀಯತೆಯನ್ನು ಪೋಷಿಸಿದಾಗ ಇತಿಹಾಸಗಳು ಸಮೃದ್ಧವಾಗುತ್ತವೆ. ಹಾಗೆ ಧರ್ಮದ ವಿಚಾರ ಬಂದಾಗಲು ಸಮಾಜ ಇದೇ ತಳಹದಿಯ ಮೇಲೆ ನಿಂತರೆ ದೇಶದಲ್ಲಿ ಜನ ಸಾಮರಸ್ಯದಿಂದ ಬದುಕಬಹುದು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಎಲ್ಲವೂ ಜಾತಿ, ಧರ್ಮದ ಮೇಲೆ ದೇಶ ನಡೆಯುತ್ತಿದೆ. ಎಲ್ಲದಕ್ಕೂ ಧರ್ಮವೇ ಮುಖ್ಯ. ಹಿಂದೂ, ಇಸ್ಲಾಂ ಧರ್ಮದ ಮಧ್ಯೆ ದೊಡ್ಡ ಕಂದಕವೇ ಬೆಳದಿದೆ. ಆದರೆ ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ ಮಾತು ಎಲ್ಲರೂ ಯೋಚನೆಗೆ ಹಚ್ಚುವಂತೆ ಮಾಡಿದೆ.

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್ ಅವರು, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಕಿವಿ ಮಾತು ಹೇಳಿದರು.

ಹಿಂದೂ-ಮುಸ್ಲಿಂ ಎನ್ನುವ ಬೇಧಭಾವವೇಕೆ? ಎಂದು ಆಜಾದ್ ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದರು.  ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ  ಭಾರತದ ಮಣ್ಣಿನಲ್ಲೇ ಬೆರೆಯುತ್ತಾರೆ, ಹಾಗಾಗಿ ಮುಸ್ಲಿಮರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಬೇಧಬಾವ ಏಕೆ ಎಂದರು.

ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಆಜಾದ್ ಅಬರ ಮಾತು ಎಷ್ಟು ಮಂದಿಗೆ ಇಷ್ಟವಾಗುತ್ತೊ ಇಲ್ವೋ ಗೊತ್ತಿಲ್ಲ. ಆದರೆ ನಾವು ಭಾರತೀಯರು, ನಾವೆಲ್ಲರೂ ಒಂದೇ ಎನ್ನುವ ಮಾತು ಒಪ್ಪಲೇ ಬೆಕಾದ್ದು.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

5 minutes ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

17 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago