Advertisement
Opinion

ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್

Share

ಸಮಾಜವು ರಾಷ್ಟ್ರೀಯತೆಯನ್ನು ಪೋಷಿಸಿದಾಗ ಇತಿಹಾಸಗಳು ಸಮೃದ್ಧವಾಗುತ್ತವೆ. ಹಾಗೆ ಧರ್ಮದ ವಿಚಾರ ಬಂದಾಗಲು ಸಮಾಜ ಇದೇ ತಳಹದಿಯ ಮೇಲೆ ನಿಂತರೆ ದೇಶದಲ್ಲಿ ಜನ ಸಾಮರಸ್ಯದಿಂದ ಬದುಕಬಹುದು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಎಲ್ಲವೂ ಜಾತಿ, ಧರ್ಮದ ಮೇಲೆ ದೇಶ ನಡೆಯುತ್ತಿದೆ. ಎಲ್ಲದಕ್ಕೂ ಧರ್ಮವೇ ಮುಖ್ಯ. ಹಿಂದೂ, ಇಸ್ಲಾಂ ಧರ್ಮದ ಮಧ್ಯೆ ದೊಡ್ಡ ಕಂದಕವೇ ಬೆಳದಿದೆ. ಆದರೆ ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ ಮಾತು ಎಲ್ಲರೂ ಯೋಚನೆಗೆ ಹಚ್ಚುವಂತೆ ಮಾಡಿದೆ.

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್ ಅವರು, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಕಿವಿ ಮಾತು ಹೇಳಿದರು.

ಹಿಂದೂ-ಮುಸ್ಲಿಂ ಎನ್ನುವ ಬೇಧಭಾವವೇಕೆ? ಎಂದು ಆಜಾದ್ ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದರು.  ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ  ಭಾರತದ ಮಣ್ಣಿನಲ್ಲೇ ಬೆರೆಯುತ್ತಾರೆ, ಹಾಗಾಗಿ ಮುಸ್ಲಿಮರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಬೇಧಬಾವ ಏಕೆ ಎಂದರು.

ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಆಜಾದ್ ಅಬರ ಮಾತು ಎಷ್ಟು ಮಂದಿಗೆ ಇಷ್ಟವಾಗುತ್ತೊ ಇಲ್ವೋ ಗೊತ್ತಿಲ್ಲ. ಆದರೆ ನಾವು ಭಾರತೀಯರು, ನಾವೆಲ್ಲರೂ ಒಂದೇ ಎನ್ನುವ ಮಾತು ಒಪ್ಪಲೇ ಬೆಕಾದ್ದು.

Source: Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

2 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

2 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

9 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

10 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago