Advertisement
Opinion

ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್

Share

ಸಮಾಜವು ರಾಷ್ಟ್ರೀಯತೆಯನ್ನು ಪೋಷಿಸಿದಾಗ ಇತಿಹಾಸಗಳು ಸಮೃದ್ಧವಾಗುತ್ತವೆ. ಹಾಗೆ ಧರ್ಮದ ವಿಚಾರ ಬಂದಾಗಲು ಸಮಾಜ ಇದೇ ತಳಹದಿಯ ಮೇಲೆ ನಿಂತರೆ ದೇಶದಲ್ಲಿ ಜನ ಸಾಮರಸ್ಯದಿಂದ ಬದುಕಬಹುದು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಎಲ್ಲವೂ ಜಾತಿ, ಧರ್ಮದ ಮೇಲೆ ದೇಶ ನಡೆಯುತ್ತಿದೆ. ಎಲ್ಲದಕ್ಕೂ ಧರ್ಮವೇ ಮುಖ್ಯ. ಹಿಂದೂ, ಇಸ್ಲಾಂ ಧರ್ಮದ ಮಧ್ಯೆ ದೊಡ್ಡ ಕಂದಕವೇ ಬೆಳದಿದೆ. ಆದರೆ ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ ಮಾತು ಎಲ್ಲರೂ ಯೋಚನೆಗೆ ಹಚ್ಚುವಂತೆ ಮಾಡಿದೆ.

Advertisement
Advertisement

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

Advertisement

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್ ಅವರು, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಕಿವಿ ಮಾತು ಹೇಳಿದರು.

ಹಿಂದೂ-ಮುಸ್ಲಿಂ ಎನ್ನುವ ಬೇಧಭಾವವೇಕೆ? ಎಂದು ಆಜಾದ್ ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದರು.  ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ  ಭಾರತದ ಮಣ್ಣಿನಲ್ಲೇ ಬೆರೆಯುತ್ತಾರೆ, ಹಾಗಾಗಿ ಮುಸ್ಲಿಮರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಬೇಧಬಾವ ಏಕೆ ಎಂದರು.

Advertisement

ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಆಜಾದ್ ಅಬರ ಮಾತು ಎಷ್ಟು ಮಂದಿಗೆ ಇಷ್ಟವಾಗುತ್ತೊ ಇಲ್ವೋ ಗೊತ್ತಿಲ್ಲ. ಆದರೆ ನಾವು ಭಾರತೀಯರು, ನಾವೆಲ್ಲರೂ ಒಂದೇ ಎನ್ನುವ ಮಾತು ಒಪ್ಪಲೇ ಬೆಕಾದ್ದು.

Source: Digital Media

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

16 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

17 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

17 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

17 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

20 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

20 hours ago