ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯಲ್ಲಿ ಹೇಳಿದ್ದಾರೆ. ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಕಾರಿಡಾರ್ ನಿರ್ಮಾಣ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದನ್ನು ತಡೆಯಲು ಮತ್ತು ಪ್ರಾಣಿಗಳು ನಾಡಿಗೆ ಬರದಂತೆ ತಡೆಯಲು ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ಆನೆ, ಚಿರತೆ, ಹುಲಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವುಗಳು ಆಹಾರ, ನೀರು ಹರಿಸಿ ನಾಡಿಗೆ ಬರುತ್ತಿವೆ. ಇದರಿಂದ ಸಂಘರ್ಷ ಎದುರಾಗುತ್ತಿದೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿ, ನಾಳೆ ಮಂಡನೆಯಾಗಲಿರುವ ಕೇಂದ್ರ ಮುಂಗಡಪತ್ರದಲ್ಲಿ ರಾಜ್ಯಕ್ಕೆ ಹಲವು ಯೋಜನೆಗಳನ್ನು ಮಂಡಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು.
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…