ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೀಗಾಗಿ ಮುಂದಿನ ವಾರವಿಡೀ ರಣ ಬಿಸಿಲು ಕರುನಾಡನ್ನ ಕಾಡಲಿದೆ. ಭಾನುವಾರ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅದಾಗ್ಯೂ, ಈ ವಾರದಲ್ಲಿ ಎಲ್ಲೂ ಮಳೆಯಾಗುವ ಮುನ್ಸೂಚನೆಯೂ ಇಲ್ಲದಾಗಿದೆ. ಆದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಎಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಆದರೆ, ಎಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಮಳೆಯ ಹೊರತಾಗಿ ಬಿಸಿಲಿನ ತಾಪಮಾನ ಅಧಿಕವಾಗತೊಡಗಿದೆ. ಜನಸಾಮಾನ್ಯರು ಹಗಲಿನ ಹೊತ್ತು ಹೊರ ಬರಲು ಕಷ್ಟಪಡುವಂತಾಗಿದೆ. ಮೇ.6 ರ ನಂತರ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿಯೂ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಈಗಾಗಲೇ ಬೆಂಗಳೂರು ಮಹಾನಗರ 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಟ್ಟಿನಲ್ಲಿ ರಾಜ್ಯದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆಯ ಮುನ್ಸೂಚನೆಯೂ ಕೈಗೊಡುತ್ತಿದ್ದು ಸಾಧ್ಯವಾದಷ್ಟರ ಮಟ್ಟಿಗೆ ಬಿಸಿಲಿನ ತಾಪಮಾನದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…