ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೀಗಾಗಿ ಮುಂದಿನ ವಾರವಿಡೀ ರಣ ಬಿಸಿಲು ಕರುನಾಡನ್ನ ಕಾಡಲಿದೆ. ಭಾನುವಾರ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅದಾಗ್ಯೂ, ಈ ವಾರದಲ್ಲಿ ಎಲ್ಲೂ ಮಳೆಯಾಗುವ ಮುನ್ಸೂಚನೆಯೂ ಇಲ್ಲದಾಗಿದೆ. ಆದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಎಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಆದರೆ, ಎಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಮಳೆಯ ಹೊರತಾಗಿ ಬಿಸಿಲಿನ ತಾಪಮಾನ ಅಧಿಕವಾಗತೊಡಗಿದೆ. ಜನಸಾಮಾನ್ಯರು ಹಗಲಿನ ಹೊತ್ತು ಹೊರ ಬರಲು ಕಷ್ಟಪಡುವಂತಾಗಿದೆ. ಮೇ.6 ರ ನಂತರ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿಯೂ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಈಗಾಗಲೇ ಬೆಂಗಳೂರು ಮಹಾನಗರ 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಟ್ಟಿನಲ್ಲಿ ರಾಜ್ಯದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆಯ ಮುನ್ಸೂಚನೆಯೂ ಕೈಗೊಡುತ್ತಿದ್ದು ಸಾಧ್ಯವಾದಷ್ಟರ ಮಟ್ಟಿಗೆ ಬಿಸಿಲಿನ ತಾಪಮಾನದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…