Advertisement
MIRROR FOCUS

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

Share

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹೀಗಾಗಿ ಮುಂದಿನ ವಾರವಿಡೀ ರಣ ಬಿಸಿಲು ಕರುನಾಡನ್ನ ಕಾಡಲಿದೆ. ಭಾನುವಾರ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಅದಾಗ್ಯೂ, ಈ ವಾರದಲ್ಲಿ ಎಲ್ಲೂ ಮಳೆಯಾಗುವ ಮುನ್ಸೂಚನೆಯೂ ಇಲ್ಲದಾಗಿದೆ. ಆದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಎಪ್ರಿಲ್‌ ತಿಂಗಳ ಮಧ್ಯಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಆದರೆ, ಎಪ್ರಿಲ್‌ ತಿಂಗಳ ಅಂತ್ಯದ ವೇಳೆಗೆ ಮಳೆಯ ಹೊರತಾಗಿ ಬಿಸಿಲಿನ ತಾಪಮಾನ ಅಧಿಕವಾಗತೊಡಗಿದೆ. ಜನಸಾಮಾನ್ಯರು ಹಗಲಿನ ಹೊತ್ತು ಹೊರ ಬರಲು ಕಷ್ಟಪಡುವಂತಾಗಿದೆ. ಮೇ.6 ರ ನಂತರ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.

ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿಯೂ 38 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದೆ. ಈಗಾಗಲೇ ಬೆಂಗಳೂರು ಮಹಾನಗರ 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಟ್ಟಿನಲ್ಲಿ ರಾಜ್ಯದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆಯ ಮುನ್ಸೂಚನೆಯೂ ಕೈಗೊಡುತ್ತಿದ್ದು ಸಾಧ್ಯವಾದಷ್ಟರ ಮಟ್ಟಿಗೆ ಬಿಸಿಲಿನ ತಾಪಮಾನದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

12 seconds ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

6 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

6 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

17 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

18 hours ago