ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ವಾರದಲ್ಲಿ ರಾಜ್ಯಾದ್ಯಂತ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೀಗಾಗಿ ಮುಂದಿನ ವಾರವಿಡೀ ರಣ ಬಿಸಿಲು ಕರುನಾಡನ್ನ ಕಾಡಲಿದೆ. ಭಾನುವಾರ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅದಾಗ್ಯೂ, ಈ ವಾರದಲ್ಲಿ ಎಲ್ಲೂ ಮಳೆಯಾಗುವ ಮುನ್ಸೂಚನೆಯೂ ಇಲ್ಲದಾಗಿದೆ. ಆದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಎಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಆದರೆ, ಎಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಮಳೆಯ ಹೊರತಾಗಿ ಬಿಸಿಲಿನ ತಾಪಮಾನ ಅಧಿಕವಾಗತೊಡಗಿದೆ. ಜನಸಾಮಾನ್ಯರು ಹಗಲಿನ ಹೊತ್ತು ಹೊರ ಬರಲು ಕಷ್ಟಪಡುವಂತಾಗಿದೆ. ಮೇ.6 ರ ನಂತರ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿಯೂ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಈಗಾಗಲೇ ಬೆಂಗಳೂರು ಮಹಾನಗರ 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗುತ್ತಿದೆ. ಒಟ್ಟಿನಲ್ಲಿ ರಾಜ್ಯದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆಯ ಮುನ್ಸೂಚನೆಯೂ ಕೈಗೊಡುತ್ತಿದ್ದು ಸಾಧ್ಯವಾದಷ್ಟರ ಮಟ್ಟಿಗೆ ಬಿಸಿಲಿನ ತಾಪಮಾನದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…