Advertisement
MIRROR FOCUS

ಅರಣ್ಯ ಸುತ್ತಮುತ್ತ ಕೃಷಿ ಮಾಡುವ ರೈತರಿಗೆ ಕೃಷಿ ಭೂಮಿ ಮಂಜೂರಾತಿ : ಕೆಲ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ ಬಿಡುಗಡೆ ಮಾಡಲಿರುವ ಕಂದಾಯ ಇಲಾಖೆ

Share

ರೈತರು(farmer) ಈ ಸಮಸ್ಯೆಗಳನ್ನು(problem) ಹಲವು ದಶಕಗಳ ಕಾಲದಿಂದ ಎದುರಿಸುತ್ತಿದ್ದಾರೆ. ಆದರೆ ಇದೀಗ ಕರ್ನಾಟಕ(Karnataka) ರಾಜ್ಯದಲ್ಲಿ ಸರಕಾರಿ(govt) ಅರಣ್ಯದ(forest) ಹತ್ತಿರದಲ್ಲಿ ಕೃಷಿ(Agriculture) ಮಾಡುತ್ತಿರುವ ಎಲ್ಲ ರೈತರಿಗೂ ಕೂಡ ಅರಣ್ಯ ಇಲಾಖೆ(Forest department) ಕಡೆಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅಂತಹ ರೈತರಿಗೆ ಕಂದಾಯ ಸಚಿವರು(Revenue Minister) ಇದೀಗ ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯದ ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೆ ನಡೆಸುವ ಮೂಲಕ ರೈತರು ಈ ಸಮಸ್ಯೆಗಳನ್ನು   ರೈತರ ಸಮಸ್ಯೆಗಳಿಗೆ ಅಂತ್ಯ ಹಾಡುವ ಭರವಸೆಯನ್ನು ನೀಡಲಾಗಿದೆ. ಇದರೊಂದಿಗೆ ಈ ಸಂಬಂಧದ ಮೂಲಕ ಸರಕಾರವು ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಿದ್ದು ಈಗಾಗಲೇ ರಾಜ್ಯದಲ್ಲಿ ಜಂಟಿ ಸರ್ವೆ ಕೂಡ ಆರಂಭವಾಗಿದೆ.

ಸರಕಾರದ ಜಂಟಿ ಸರ್ವೆ ಇಲಾಖೆಯಿಂದ ರೈತರ ಭೂಮಿಯ ಬಗ್ಗೆ ಖಚಿತ ಮಾಹಿತಿಗಳನ್ನು ತಿಳಿಯಲಿದ್ದು ಒಂದು ವೇಳೆ ಅರಣ್ಯ ಇಲಾಖೆಯು ಕಂದಾಯ ಭೂಮಿಯನ್ನು ತಪ್ಪಾಗಿ ನಮೂದಿಸಿದ್ದರೆ ಅಥವಾ ನೋಟಿಫೈ ಮಾಡಿರುವುದು ಜಂಟಿ ಸರ್ವೆ ಹಾಗೂ ಡ್ರೋನ್ ಸರ್ವೆಯಿಂದ ಖಚಿತವಾದಲ್ಲಿ ಅಂತಹ ಭೂಮಿಯನ್ನು ಮಾಡಲು ಅರಣ್ಯ ಇಲಾಖೆಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ತಿಳಿಸಿದ ಇವರು ಜಂಟಿ ಸರ್ವೆ ಬಳಿಕ ಕಂದಾಯ ಜಮೀನು ಹಾಗೂ ಅರಣ್ಯ ಜಮೀನು, ಇದರ ಗಡಿಗಳನ್ನು ನಿಖರವಾಗಿ ಗುರುತಿಸಲು ಸೂಚನೆ ನೀಡಿದ್ದು ಗಡಿ ಗುರುತಿಸಿದ ನಂತರವೇ ಅಂತಹ ಜಮೀನಿನಲ್ಲಿ ಕೃಷಿ ಚಟುವಟಿಕೆಯು ನಡೆಯುತ್ತಿದ್ದರೆ ಅಂತಹ ರೈತರಿಗೆ ರೈತ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ ಇದರೊಂದಿಗೆ ಫಾರಂ 57ರ ಅಡಿಯ ಪ್ರಕಾರ ಅರ್ಹ ರೈತರು ಅರ್ಜಿ ಸಲ್ಲಿಸಿದರು ಕೂಡ ಬಕರ್ ಹುಕುಮ್ ಮೂಲಕ ಭೂಮಿ ಮಂಜೂರು ಮಾಡಲಾಗುವುದು ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಕಳೆದ ಎರಡು ತಿಂಗಳಗಳಿಂದ ಎಲ್ಲಾ ಕಡೆ ಜಂಟಿ ಸರ್ವೆ ಕಾರ್ಯವು ಪ್ರಗತಿಯಲ್ಲಿದ್ದು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಭೂ ಮಾಪಕರು ಹಾಗೂ ಪರವಾನಗಿ ಹೊಂದಿರುವಂತಹ ಭೂಮಾಪಕರ ಸಹಾಯಗಳಿಂದ ಸರ್ವೆ ಕೆಲಸವನ್ನು ಆರಂಭಿಸಲಾಗಿದೆ.

ಈ ಕಾರ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಾಗಿ ಗುರುತಿಸಿರುವ ಸಂಬಂಧ ಪಟ್ಟ ಹೆಚ್ಚು ಸಮಸ್ಯೆಗಳಿರುವ ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆದ್ಯತೆಯ ಮೇರೆಯಂತೆ ಭೂಮಾಪಕರನ್ನು ತುರ್ತು ನಿಯೋಜನೆಗೊಳಿಸಿ ಜಂಟಿಯಾಗಿ ಸರ್ವೆ ಕೆಲಸ ಮುಗಿಸಲು ವೇಗ ನೀಡಲಾಗಿದೆ ಇದರೊಂದಿಗೆ ಪ್ರತಿ ಜಿಲ್ಲೆಯ ಜಮೀನನ್ನು ಸರ್ವೆ ನಡೆಸಲು ಡ್ರೋನ್ ಸರ್ವೇ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

10 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago