ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

November 4, 2023
10:08 PM

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.

ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror