ಸುದ್ದಿಗಳು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.

Advertisement
Advertisement

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.

ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

6 minutes ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

2 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

10 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

12 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

17 hours ago