ಸುದ್ದಿಗಳು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.

Advertisement

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.

ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

5 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

5 hours ago

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…

7 hours ago

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …

7 hours ago

ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…

8 hours ago