ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.
ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.
ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…