Advertisement
ಸುದ್ದಿಗಳು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Share

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.

ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

13 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago