ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.
ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.
ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…