Advertisement
ಸುದ್ದಿಗಳು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Share

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.

ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago