Advertisement
Opinion

ಸಕಲ ಸಮಸ್ಯೆಗೂ ಲೋಳೆಸರ ಪರಿಹಾರ | ಮನೆಯಂಗಳದಲ್ಲಿ ಸುಲಭವಾಗಿ ಬೆಳೆಯೋ ಔಷಧೀಯ ಗಿಡ

Share

ಅಲೋವೆರಾ #Aloevera ಸಣ್ಣ ಸಣ್ಣ ಪಾಟ್‌ನಲ್ಲಿ ಮನೆ ಮುಂದೆಯೇ , ಬೇಕಾದರೆ ಮನೆಯೊಳಗೆಯೇ ಬೆಳೆಸಬಹುದಾದಂತ ಪುಟ್ಟ ಗಿಡ. ಇದನ್ನು ಆರೋಗ್ಯ, ಸೌಂದರ್ಯಕ್ಕೂ ಬಹಳ ಉತ್ತಮ. ಬ್ಯೂಟಿ ವರ್ಧಕವಾಗಿರುವ ಇದರ ಪೇಸ್ಟ್‌, ಜೆಲ್‌ ಇತ್ಯಾದಿಯನ್ನು ಕೆಲವು ದಿನ ಶೇಖರಿಸಿಯೂ ಇಡಬಹುದು.

ಅಲೋವೆರಾವು ಹಲವಾರು ಆರೋಗ್ಯ ಲಾಭಗಳನ್ನು ಹೊಂದಿದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಇಂದಿನ ದಿನಗಳಲ್ಲಿ ಸೌಂದರ್ಯವರ್ಧಕವಾಗಿ ಅಲೋವೆರಾವನ್ನು ಬಳಸದೆ ಇರುವವರು ತುಂಬಾ ಕಡಿಮೆ. ಯಾಕೆಂದರೆ ಅಲೋವೆರಾದಲ್ಲಿ ಇರುವಂತಹ ಸೌಂದರ್ಯವರ್ಧಕ ಗುಣಗಳು ಬೇರೆ ಯಾವುದೇ ರೀತಿಯ ಸಾಮಗ್ರಿಗಳಲ್ಲೂ ನಿಮಗೆ ಸಿಗಲಾರದು. ಹೀಗಾಗಿ ಅಲೋವೆರಾವು ತುಂಬಾ ಪರಿಣಮಕಾರಿ ಆಗಿ ಸೌಂದರ್ಯವರ್ಧಕ ಉತ್ಪನ್ನಗಳಲ್ಲೂ ಬಳಕೆ ಮಾಡಲಾಗುತ್ತಾ ಇದೆ. ನೇರವಾಗಿ ಅಲೋವೆರಾ ಲೋಳೆಯನ್ನು ಮೈಗೆ ಹಚ್ಚಿಕೊಂಡರೂ ಅದರ ಲಾಭಗಳು ಸಿಗುವುದು. ಇದು ಕೆಲವೊಂದು ಚರ್ಮದ ಸಮಸ್ಯೆಗಳನ್ನು ನಿವಾರಿಸುವ ಜತೆಗೆ ಚರ್ಮಕ್ಕೆ ಮೊಶ್ಚಿರೈಸ್ ನೀಡುವುದು.

Advertisement

ತಾಜಾ ಅಲೋವೆರಾ ಲೋಳೆಯನ್ನು ಕುಡಿದರೆ ಅದರಿಂದ ಜೀರ್ಣಕ್ರಿಯೆ ಸುಧಾರಣೆ ಆಗುವುದು ಮತ್ತು ಅಸಿಡಿಟಿಯಿಂದ ಬಳಲುವ ಸಮಸ್ಯೆಗೆ ಇದು ಪರಿಹಾರ ನೀಡುವುದು. ನೀವು ಅಲೋವೆರಾ ಲೋಳೆಯನ್ನು ಬೇರೆ ಜ್ಯೂಸ್ ಜತಗೆ ಸೇರಿಸಿಕೊಂಡು ಕುಡಿಯಬಹುದು. ಇದು ದೇಹವನ್ನು ಒಳಗಿನಿಂದಲೇ ಶುದ್ಧೀಕರಿಸುವುದು. ಹೀಗಾಗಿ ಇದರ ಪರಿಣಾಮವು ಚರ್ಮದಲ್ಲಿ ಕಾಣಸಿಗುವುದು. ಚರ್ಮವು ಸ್ವಚ್ಛವಾಗಿ ಕಾಂತಿಯುತವಾಗಿರುವುದು. ನೀವು ಅಲೋವೆರಾವನ್ನು ಚರ್ಮದ ಆರೈಕೆಗೆ ಹೇಗೆ ಬಳಸಿಕೊಳ್ಳಬಹುದು ಎಂದು ನಾವು ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ.

ರಾತ್ರಿ ವೇಳೆ ಕ್ರೀಮ್ ಆಗಿ ಬಳಸಿ : ಬೇಸಗೆ ಕಾಲದಲ್ಲಿ ನೀವು ಮುಖಕ್ಕೆ ತುಂಬಾ ಜಿಡ್ಡಿನ ಕ್ರೀಮ್ ಬಳಸಿಕೊಂಡರೆ ಅದರಿಂದ ತುಂಬಾ ಸಮಸ್ಯೆ ಆಗಬಹುದು. ಯಾಕೆಂದರೆ ಉಷ್ಣತೆ ಹೆಚ್ಚಿರುವುದು ಮತ್ತು ಬೆವರುವುದು. ಹೀಗಾಗಿ ಮುಖಕ್ಕೆ ಈ ಸಮಯದಲ್ಲಿ ನೀವು ಜಿಡ್ಡಿನ ಕ್ರೀಮ್ ಬಳಸಬೇಡಿ. ರಾತ್ರಿ ಮಲಗಲು ಹೋಗುವ ಮೊದಲು ನೀವು ಅಲೋವೆರಾ ಲೋಳೆ ಹಚ್ಚಿಕೊಳ್ಳಿ. ಇದು ಚರ್ಮದಲ್ಲಿ ನಿಧಾನವಾಗಿ ಹೀರಿಕೊಳ್ಳುವುದು ಮತ್ತು ಚರ್ಮಕ್ಕೆ ಬೇಕಾಗುವಂತಹ ಮೊಶ್ಚಿರೈಸ್ ನ್ನು ಇದು ಒದಗಿಸುವುದು. ಈ ಲೋಳೆಯು ಚರ್ಮವನ್ನು ತುಂಬಾ ತಂಪಾಗಿಡಲು ನೆರವಾಗುವುದು.

Advertisement

ಸುಡುವ ಬಿಸಿಲಿಗೆ : ಬಿಸಿಲಿಗೆ ಹೊರಗಡೆ ಹೋದರೆ ಆಗ ಚರ್ಮವು ಸುಡುವುದು ಖಚಿತ. ಹೀಗಾಗಿ ಬೇಸಗೆ ಕಾಲದಲ್ಲಿ ಹೊರಗಡೆ ಹೋದರೆ ಆಗ ಬಿಸಿಲಿನಿಂದಾಗಿ ಮುಖದ ಮೇಲೆ ಕಲೆಗಳು ಮೂಡಬಹುದು. ಇದರಿಂದ ಚರ್ಮವು ಕೆಂಪಾಗುವುದು, ಸುಡುವುದು ಮತ್ತು ಎದ್ದು ಬರಲು ಆರಂಭಿಸುವುದು. ಇದನ್ನು ತಡೆಯಲು ಅಲೋವೆರಾ ಹಚ್ಚಿಕೊಳ್ಳಬೇಕು. ಬಿಸಿಲಿನಿಂದ ಮನೆಗೆ ಬಂದ ಬಳಿಕ ನೀವು ಸಂಪೂರ್ಣ ಮೈಗೆ ಅಲೋವೆರಾ ಲೋಳೆ ಹಚ್ಚಿಕೊಳ್ಳಿ. ಇದು ನಿಮಗೆ ಶಮನ ನೀಡುವುದು. ಇದರಿಂದ ಚರ್ಮಕ್ಕೆ ತಂಪು ಸಿಗುವುದು ಮತ್ತು ಕಲೆಗಳು ಮಾಯವಾಗುವುದು. ಅಲೋವೆರಾ ಚರ್ಮದಲ್ಲಿನ ತಾಪಮಾನ ಕಡಿಮೆ ಮಾಡಿ ತಂಪು ಉಂಟು ಮಾಡುವುದು.

ಬಿಸಿಲಿನ ಕಲೆಗಳಿಗೆ: ಬಿಸಿಲಿಗೆ ಹೊರಗಡೆ ಹೋದರೆ ಆಗ ಚರ್ಮದ ಮೇಲೆ ಕಪ್ಪು ಕಲೆಗಳು ಮೂಡುವುದು ಖಚಿತ. ಬಿಸಿಲಿನಿಂದಾಗಿ ಚರ್ಮದ ಬಣ್ಣವು ಕುಂದುವುದು. ಬಿಸಿಲಿನಿಂದ ಚರ್ಮದ ಬಣ್ಣ ಕುಂದಿರುವ ಸಮಸ್ಯೆ ನಿವಾರಣೆ ಮಾಡಲು ಅರ್ಧ ಲಿಂಬೆ ರಸಕ್ಕೆ ಒಂದು ಚಮಚ ಅಲೋವೆರಾ ಲೋಳೆ ಹಾಕಿಕೊಂಡು ಸರಿಯಾಗಿ ಅದನ್ನು ಮಿಶ್ರಣ ಮಾಡಿ. ಇದರ ಬಳಿಕ ಮುಖಕ್ಕೆ ಹಚ್ಚಿಕೊಳ್ಳಿ. ಲಿಂಬೆಯಲ್ಲಿ ನೈಸರ್ಗಿಕವಾಗಿ ಬ್ಲೀಚಿಂಗ್ ಗುಣಗಳು ಇವೆ ಮತ್ತು ಅಲೋವೆರಾವು ಮೂಲ ಮಾಸ್ಕ್ ಆಗಿ ಕೆಲಸ ಮಾಡುವುದು. ಇದು ಚರ್ಮಕ್ಕೆ ತೇವಾಂಶ ನೀಡುವುದು. ಲಿಂಬೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿನ ಸಿಟ್ರಿಕ್ ಆಮ್ಲವು ಇರುವ ಪರಿಣಾಮವಾಗಿ ಕೆಲವೊಂದು ಸಲ ನೇರವಾಗಿ ಲಿಂಬೆಯನ್ನು ಹಚ್ಚಿಕೊಂಡರೆ ಅದರಿಂದ ಸಮಸ್ಯೆಯಾಗ ಬಹುದು. ಹೀಗಾಗಿ ಅಲೋವೆರಾದ ಜತೆಗೆ ಸೇರಿಸಿಕೊಂಡು ಹಚ್ಚಿದರೆ ಅದು ಆಮ್ಲವನ್ನು ಸಮತೋಲನದಲ್ಲಿ ಇಡುವುದು. ಹೀಗಾಗಿ ತುಂಬಾ ಸೂಕ್ಷ್ಮವಾದ ಚರ್ಮಕ್ಕೂ ಇದು ನೆರವಾಗುವುದು.

Advertisement

ಮೊಡವೆಗೆ: ಬೇಸಿಗೆ ಸಮಯದಲ್ಲಿ ಹೆಚ್ಚಿನ ಜನರಲ್ಲಿ ಮೊಡವೆ ಹಾಗೂ ಬೊಕ್ಕೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ. ಯಾಕೆಂದರೆ ಗಾಳಿಯಲ್ಲಿ ಹೆಚ್ಚಿನ ಪ್ರಮಾಣ ಮೊಶ್ಚಿರೈಸರ್ ಇರುವ ಕಾರಣದಿಂದಾಗಿ ಹೀಗೆ ಆಗುವುದು ಇದೆ. ಮೊಡವೆಗಳು ಕೆಲವೊಂದು ಸಂದರ್ಭದಲ್ಲಿ ತುಂಬಾ ನೋವುಂಟು ಮಾಡುವುದು. ಇದರಿಂದ ಅಲೋವೆರಾವನ್ನು ಹಚ್ಚಿಕೊಂಡರೆ ಆಗ ಮೊಡವೆಗಳಿಂದ ಆಗುವಂತಹ ನೋವು ಹಾಗೂ ಕಿರಿಕಿರಿಗೆ ಪರಿಹಾರ ಒದಗಿಸುವುದು. ಇದು ಚರ್ಮಕ್ಕೆ ಶಮನ ನೀಡುವ ಕಾರಣದಿಂದಾಗಿ ಮೊಡವೆಗಳ ಗಾತ್ರವು ಕುಗ್ಗುವುದು. ಮೊಡವೆಗಳಿಂದಾಗಿ ನೋವು ಕಾಣಿಸಿಕೊಂಡರೆ ಆಗ ನೀವು ಈ ವಿಧಾನ ಅಳವಡಿಸಿಕೊಳ್ಳಿ.

ಬಿಸಿ ದದ್ದುಗಳಿಗೆ: ಬಿಸಿ ದದ್ದುಗಳು ಬೇಸಿಗೆ ಸಮಯದಲ್ಲಿ ಕಾಡುವಂತಹ ಮತ್ತೊಂದು ಸಮಸ್ಯೆ. ಬೇಸಗೆ ತಿಂಗಳುಗಳಲ್ಲಿ ಬಿಸಿ ದದ್ದುಗಳು ಸಾಮಾನ್ಯವಾಗಿ ಪ್ರತಿಯೊಬ್ಬರ ದೇಹದಲ್ಲೂ ಮೂಡುವುದು. ಬೆವರಿನ ಗ್ರಂಥಿಗಳು ಬ್ಲಾಕ್ ಆದ ವೇಳೆ ಸಣ್ಣ ಬೊಕ್ಕೆಗಳು ಚರ್ಮದ ಮೇಲೆ ಮೂಡುವುದು. ಈ ಭಾಗಕ್ಕೆ ಅಲೋವೆರಾ ಲೋಳೆ ಹಚ್ಚಿಕೊಂಡರೆ ಆಗ ಒಳ್ಳೆಯ ಶಮನ ಸಿಗುವುದು. ನಿಮ್ಮ ಸಮಸ್ಯೆಯು ಪರಿಹಾರ ಕಂಡುಕೊಳ್ಳುವ ತನಕ ಹೀಗೆ ಮಾಡಿ.

Advertisement

ತುರಿಕೆಯ ಚರ್ಮ: ಬೇಸಗೆಯಲ್ಲಿ ಹೆಚ್ಚಾಗಿ ಬೆವರುವ ಪರಿಣಾಮವಾಗಿ ಚರ್ಮದಲ್ಲಿ ಸಾಮಾನ್ಯವಾಗಿ ತುರಿಕೆ ಕಾಣಿಸುವುದು. ತೇವವು ಹೆಚ್ಚಾಗುವ ಪರಿಣಾಮ ತುರಿಕೆ ಕಾಣಿಸುವುದು ಮತ್ತು ಇಡೀ ದಿನ ಬಿಗಿಯಾದ ಬಟ್ಟೆ ಧರಿಸಿಕೊಂಡರೆ ಆಗ ಖಂಡಿತವಾಗಿಯೂ ಈ ಸಮಸ್ಯೆಯು ಬರುವುದು. ಚರ್ಮಕ್ಕೆ ಹೆಚ್ಚಿನ ಗಾಳಿಯು ಸಿಗದೆ ಇರುವ ಪರಿಣಾಮವಾಗಿ ತುರಿಕೆ ಕಂಡುಬರುವುದು.

ಗಾಯದ ಕಲೆ: ಅಲೋವೆರಾ ಲೋಳೆಯು ಗಾಯದಿಂದಾಗಿ ಉಂಟಾಗಿರುವ ಕಲೆ ನಿವಾರಣೆ ಮಾಡುವುದು. ಅದೇ ರೀತಿಯಾಗಿ ಮೊಡವೆ ಹಾಗೂ ಬೊಕ್ಕೆಗಳಿಂದ ಆದ ಕಲೆಗಳು ಕೂಡ ಅಲೋವೆರಾ ಹಚ್ಚಿ ನಿವಾರಿಸಬಹುದು.

Advertisement

ತರುಚಿದ ಕಲೆಗಳು :ತರುಚಿದ ಕಲೆಗಳು ಇರುವಂತಹ ಜಾಗಕ್ಕೆ ಅಲೋವೆರಾ ಲೋಳೆ ಮತ್ತು ವಿಟಮಿನ್ ಇ ಎಣ್ಣೆಯನ್ನು ಮಿಶ್ರಣ ಮಾಡಿಕೊಂಡು ನೇರವಾಗಿ ಹಚ್ಚಿಬಿಡಿ. ಇದು ಗಾಯದ ಕಲೆಗಳು ಹಾಗೆ ಮಾಸುವಂತೆ ಮಾಡುವುದು.

ತಲೆಹೊಟ್ಟು : ತಲೆಹೊಟ್ಟು ಎನ್ನುವುದು ಚರ್ಮದ ಸಮಸ್ಯೆ ಅಲ್ಲದೆ ಇದ್ದರೂ ಇದು ತಲೆಬುರುಡೆಯ ಸಮಸ್ಯೆಯಾಗಿರುವುದು. ಹೀಗಾಗಿ ಇದು ಚರ್ಮದ ಮೇಳೆ ಪರಿಣಾಮ ಬೀರುವುದು. ಇದರಿಂದ ಅಲೋವೆರಾ ಹಚ್ಚಿಕೊಂಡರೆ ಅದು ತಲೆಹೊಟ್ಟು ನಿವಾರಣೆ ಮಾಡುವುದು.

Advertisement
ಬರಹ :
Dr.Mahantesh Jogi, Assistant Professor of Horticulture, Agriculture college Kalaburgi
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

18 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

19 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

23 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 day ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago