Advertisement
MIRROR FOCUS

ಈಗಲೇ ಬತ್ತಿದ ಜೀವನದಿ ಕಾವೇರಿ | KRS ಅಣೆಕಟ್ಟಿನಲ್ಲಿ ಕ್ಷೀಣಿಸಿದ ನೀರಿನ ಪ್ರಮಾಣ | ಕುಡಿಯುವ ನೀರಿಗೆ ಉಂಟಾಗಲಿದೆ ಹಾಹಾಕಾರ…!?

Share

ಜೀವನದಿ ಕಾವೇರಿ ಬರಿದಾಗಿದ್ದಾಳೆ. ಹಿಂದೆ ಕಂಡು ಕೇಳರಿಯದಷ್ಟು ಕಾವೇರಿ ನದಿಯ ಒಡಲು ಖಾಲಿಯಾಗಿದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟ ಹಿನ್ನೆಲೆ KRS ಆಣೆಕಟ್ಟೆಯಲ್ಲಿ ನೀರಿನ ಪ್ರಮಾಣ (KRS Dam Water level) ಕ್ಷೀಣಿಸಿದ್ದು, ರೈತರ ಬೇಸಿಗೆ ಬೆಳೆ ಸೇರಿದಂತೆ ಕುಡಿಯುವ ನೀರಿಗೆ (Drinking Water) ತೊಂದರೆ ಉಂಟಾಗಲಿದೆ. ಒಂದು ವೇಳೆ ಮಳೆ ಬಾರದಿದ್ದರೆ ಬೆಂಗಳೂರು (Bengaluru) ಸೇರಿದಂತೆ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ನೀರಿನ ಹಾಹಾಕಾರ ಸೃಷ್ಟಿಯಾಗಲಿದೆ. 

ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ಕಳೆದ ವಾರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ KRS ನಲ್ಲಿ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಸಭೆ ಬಳಿಕ ನೀರಿನ ಕೊರತೆ ಹಿನ್ನೆಲೆ ರೈತರಿಗೆ ಬೇಸಿಗೆ ಬೆಳೆ ಬೆಳೆಯದಂತೆ ಸೂಚನೆ ನೀಡಲಾಗಿದೆ.

6 ರಿಂದ 8 ಟಿಎಂಸಿ ಡೆಡ್ ಸ್ಟೋರೇಜ್ : ಮತ್ತೊಂದು ಕಡೆ ಕಾವೇರಿ ನೀರು ಪ್ರಾಧಿಕಾರ ಜನವರಿ ಅಂತ್ಯದವರೆಗೆ ಮತ್ತೆ ತಮಿಳುನಾಡಿಗೆ ಪ್ರತಿನಿತ್ಯ ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ಸದ್ಯ ಡ್ಯಾಂನಲ್ಲಿ ಸುಮಾರು 20 ಟಿಎಂಸಿ ನೀರು ಶೇಖರಣೆಯಾಗಿದೆ. ಆದರೆ ಇದರಲ್ಲಿ ಸುಮಾರು 6 ರಿಂದ 8 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ.

ಬಳಕೆಗೆ ಬೇಕು ಇಷ್ಟು ನೀರು : ಇನ್ನು ಬಳಕೆಗೆ 12 ರಿಂದ 13 ಟಿಎಂಸಿ ನೀರು ಮಾತ್ರ ಲಭ್ಯವಾಗಲಿದೆ. ಈ ನಡುವೆ ಕುಡಿಯುವ ನೀರಿಗಾಗಿ ಪ್ರತಿ ತಿಂಗಳು 2 ರಿಂದ ಎರಡೂವರೆ ಟಿಎಂಸಿ ನೀರು ಬೇಕಾಗಿದೆ. ಹೀಗಾಗಿ ಡ್ಯಾಂನಲ್ಲಿ ಶೇಖರಣೆಯಾಗಿರುವ ನೀರು ಜೂನ್ ವೇಳೆಗೆ ಖಾಲಿಯಾಗಲಿದ್ದು, ಅಷ್ಟರಲ್ಲಿ ವರುಣ ದೇವ ಕೃಪೆ ತೋರದಿದ್ದರೆ, ಕುಡಿಯುವ ನೀರಿಗೆ ಜನರು ಹಾಹಾಕಾರ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಒಟ್ಟಾರೆ ಈ ಬಾರಿ ವರುಣ ದೇವ ಕೈಕೊಟ್ಟ ಹಿನ್ನೆಲೆ ಇತ್ತ ರೈತರು ಬೆಳೆ ಬೆಳೆಯಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದು ಕಡೆ ಕಾವೇರಿ ನೀರು ಪ್ರಾಧಿಕಾರ ತಮಿಳುನಾಡು ಪರವಾಗಿ ಆದೇಶ ನೀಡುವ ಮೂಲಕ ಒಂದರ ಹಿಂದೆ ಒಂದರಂತೆ ಬರೆ ಎಳೆಯುತ್ತಿದೆ. ಈಗ ರೈತರ ಸಂಕಟದ ಜೊತೆಗೆ ಕುಡಿಯುವ ನೀರಿಗೂ ತಾತ್ಪರ್ಯ ಎದುರಾಗಲಿದ್ದು, ಮುಂದೆ ಕುಡಿಯುವ ನೀರಿಗಾಗಿ ಜನ ಬೀದಿಗೆ ಇಳಿಯುವ ಸಂದರ್ಭ ನಿರ್ಮಾಣವಾಗಲಿದೆ.

– ಅಂತರ್ಜಾಲ ಮಾಹಿತಿ

Kaveri is drained of life. The river bed of Kaveri is empty like never seen before. This time due to both Monsoon and Hindsoon, the water level in KRS Dam has decreased and there will be problem for drinking water including summer crops of farmers. If there is no rain, there will be water shortage in Mysore, Mandya, Ramanagara districts including Bengaluru
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

1 hour ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

13 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

13 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

14 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

1 day ago