MIRROR FOCUS

arecanut | ಮ್ಯಾನ್ಮಾರ್‌ ಅಡಿಕೆ ಕಳ್ಳ ಸಾಗಾಣಿಕೆಗೆ ಪರ್ಯಾಯ ದಾರಿ…! | ತ್ರಿಪುರಾದಲ್ಲಿ ರೈತರ ಪ್ರತಿರೋಧ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮ್ಯಾನ್ಮಾರಿನಿಂದ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈಚೆಗೆ ಅಡಿಕೆ ಕಳ್ಳಸಾಗಾಣಿಕೆಯ ಕಿಂಗ್‌ಪಿನ್‌ ಒಬ್ಬನನ್ನು ಬಂಧಿಸಿದ್ದಾರೆ. ಇದೀಗ ಅಡಿಕೆ ಕಳ್ಳಸಾಗಾಣಿಕೆದಾರರು ಪರ್ಯಾಯ ಮಾರ್ಗವನ್ನು ಬಳಸುತ್ತಿದ್ದಾರೆ. ಹಳ್ಳಿಗಳಲ್ಲಿ ಅಡಿಕೆ ದಾಸ್ತಾನುಗೊಂಡು ಆ ಬಳಿಕ ಭಾರತದಲ್ಲಿ ಅಡಿಕೆ ಸಾಗಾಟ ನಡೆಯುತ್ತಿದೆ.  ಈ ನಡುವೆ ತ್ರಿಪುರಾರದಲ್ಲಿ ಅಡಿಕೆ ಕಳ್ಳಸಾಗಾಣಿಕೆದಾರರ ಹೆಸರಿನಲ್ಲಿ ಪೊಲೀಸರ ಕಿರುಕುಳವಾಗುತ್ತಿದೆ, ಅಡಿಕೆ ವ್ಯಾಪಾರಿಗಳು ಅಡಿಕೆ ಖರೀದಿ ಮಾಡುತ್ತಿಲ್ಲ ಎಂದು ಕೃಷಿಕರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

Advertisement
Advertisement

ಮಿಜೋರಾಂ ಮತ್ತು ಅಸ್ಸಾಂ ಮೂಲಕ ಅಡಿಕೆ ಕಾರಿಡಾರ್ ಆಗಿ ಬಳಸಿಕೊಂಡು ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವುದನ್ನು ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬಳಿಕ ಇದೀಗ ಹೊಸ ವಿಧಾನಗಳನ್ನು ಕಂಡುಕೊಂಡು , ಆ ಮೂಲಕ ಭಾರತದೊಳಕ್ಕೆ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ ಎಂದು ಅಸ್ಸಾಂ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮ್ಯಾನ್ಮಾರ್‌ನ ಚಂಪೈ ಗಡಿಯ ಮೂಲಕ ಮಿಜೋರಾಂಗೆ  ಅಡಿಕೆಗಳು ಬಂದ ನಂತರ ಅವುಗಳನ್ನು  ಅಲ್ಲಿನ ಗ್ರಾಮೀಣ ಪ್ರದೇಶದ ವಿವಿಧ ಗೋದಾಮುಗಳಲ್ಲಿ ರೈತರ ಮನೆಯಲ್ಲಿ ಸಂಗ್ರಹಿಸಲಾಗುತ್ತದೆ. ಈ ಹಿಂದೆ ಲಾರಿಗಳಲ್ಲಿ ಅಸ್ಸಾಂಗೆ ಅಡಿಕೆ ಸಾಗಿಸಲಾಗುತ್ತಿತ್ತು. ಆದರೆ ಈಗ ಸಣ್ಣ ವಾಹನಗಳ ಮೂಲಕ ಹಳ್ಳಿಯ ದಾರಿಯಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತೀ ಗ್ರಾಮಗಳಲ್ಲಿ ಪೊಲೀಸ್‌ ಕಣ್ಗಾವಲು ಸಾಧ್ಯತೆ ಕಡಿಮೆ ಇದೆ.  ಒಂದು ವೇಳೆ ಪೊಲೀಸ್‌ ದಾಳಿ ನಡೆದರೂ ಸಣ್ಣ ವಾಹನಗಳಲ್ಲಿ ಅಡಿಕೆ ವಶವಾದರೆ ನಷ್ಟದ ಪ್ರಮಾಣವೂ ಕಡಿಮೆ ಇರುತ್ತದೆ ಎನ್ನುವುದು ಕಳ್ಳ ಸಾಗಾಣಿಕೆ ಮಾಡುವವರ ಉದ್ದೇಶವೂ ಆಗಿದೆ.

ಅಸ್ಸಾಂ ಗಡಿ ದಾಟಿದ ನಂತರ ಮೇಘಾಲಯದ ಉಮ್ಕಿಯಾಂಗ್ ಪ್ರದೇಶದಲ್ಲಿ ಮತ್ತೆ ಅಡಿಕೆ ದಾಸ್ತಾನು ನಡೆಯುತ್ತದೆ. ಅಲ್ಲಿಂದ ದೊಡ್ಡ ವಾಹನಗಳ ಮೂಲಕ ದೇಶದ ವಿವಿಧ ಕಡೆಗಳಿಗೆ ರವಾನೆಯಾಗುತ್ತದೆ. ಈ ಪ್ರದೇಶದಲ್ಲಿ ಅಡಿಕೆಯೂ ಬೆಳೆಯುವುದರಿಂದ ಸಮಸ್ಯೆಗಳೂ ದೂರವಾಗುತ್ತದೆ.

ಹೀಗಾಗಿ ಅಸ್ಸಾಂ ಭಾಗದ ವಿವಿಧ ಕಡೆಗಳಲ್ಲಿ ಪೊಲೀಸರು ಆಗಾಗ ದಾಳಿ ಮಾಡುತ್ತಿದ್ದಾರೆ. ಅಕ್ರಮ ಆಮದು ಹಾಗೂ ದಾಸ್ತಾನು ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ವೇಳೆ ಅಡಿಕೆ ವ್ಯಾಪಾರಿಗಳು ಹಾಗೂ ಕೆಲವು ರೈತರೂ ವಿರೊಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅಸ್ಸಾಂ ಸೇರಿದಂತೆ ವಿವಿದೆಡೆ ಅಡಿಕೆ ಸಾಗಾಟಕ್ಕೆ ಸೂಕ್ತವಾದ ದಾಖಲೆಗಳಿಗೆ ಪೊಲೀಸರು ತಪಾಸಣೆ ನಡೆಸಲು ಆರಂಭಿಸಿದ್ದಾರೆ. ಕೃಷಿಕರುಗಳಿಗೆ ಕೃಷಿ ಇಲಾಖೆ ವತಿಯಿಂದ  ಗುರುತಿನ ಚೀಟಿ ನೀಡುವ ಯೋಜನೆ ಸಿದ್ಧವಾಗುತ್ತಿದೆ.

Advertisement

ಉತ್ತರ ತ್ರಿಪುರಾದ  ಅನೇಕ ಹಳ್ಳಿಗಳಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ವ್ಯಾಪಾರಿಗಳು ಈ ರೈತರಿಂದ ಅಡಿಕೆಗಳನ್ನು ಖರೀದಿಸುತ್ತಾರೆ ಮತ್ತು ಅಸ್ಸಾಂ ಮತ್ತು ಇತರ ರಾಜ್ಯಗಳ ವಿವಿಧ ಭಾಗಗಳಲ್ಲಿ ಅವುಗಳನ್ನು ಮಾರಾಟ ಮಾಡುತ್ತಾರೆ. ಇತ್ತೀಚೆಗೆ ಅಸ್ಸಾಂ ಪೊಲೀಸರ ದಾಳಿಯ ಕಾರಣದಿಂದ ವ್ಯಾಪಾರಿಗಳು  ಖರೀದಿಸುವುದನ್ನು ನಿಲ್ಲಿಸಿದ್ದರು. ಹೀಗಾಗಿ ಕೃಷಿಕರೂ ಸಂಕಷ್ಟಕ್ಕೆ ಒಳಗಾಗಿದ್ದರು. ಹೀಗಾಗಿ ಕೃಷಿಕರು ಪ್ರತಿಭಟನೆಯನ್ನೂ ನಡೆಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

1 hour ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

6 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

7 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

12 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

14 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

15 hours ago