Advertisement
MIRROR FOCUS

arecanut | ಮ್ಯಾನ್ಮಾರ್‌ ಅಡಿಕೆ ಕಳ್ಳ ಸಾಗಾಣಿಕೆಗೆ ಪರ್ಯಾಯ ದಾರಿ…! | ತ್ರಿಪುರಾದಲ್ಲಿ ರೈತರ ಪ್ರತಿರೋಧ |

Share

ಮ್ಯಾನ್ಮಾರಿನಿಂದ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈಚೆಗೆ ಅಡಿಕೆ ಕಳ್ಳಸಾಗಾಣಿಕೆಯ ಕಿಂಗ್‌ಪಿನ್‌ ಒಬ್ಬನನ್ನು ಬಂಧಿಸಿದ್ದಾರೆ. ಇದೀಗ ಅಡಿಕೆ ಕಳ್ಳಸಾಗಾಣಿಕೆದಾರರು ಪರ್ಯಾಯ ಮಾರ್ಗವನ್ನು ಬಳಸುತ್ತಿದ್ದಾರೆ. ಹಳ್ಳಿಗಳಲ್ಲಿ ಅಡಿಕೆ ದಾಸ್ತಾನುಗೊಂಡು ಆ ಬಳಿಕ ಭಾರತದಲ್ಲಿ ಅಡಿಕೆ ಸಾಗಾಟ ನಡೆಯುತ್ತಿದೆ.  ಈ ನಡುವೆ ತ್ರಿಪುರಾರದಲ್ಲಿ ಅಡಿಕೆ ಕಳ್ಳಸಾಗಾಣಿಕೆದಾರರ ಹೆಸರಿನಲ್ಲಿ ಪೊಲೀಸರ ಕಿರುಕುಳವಾಗುತ್ತಿದೆ, ಅಡಿಕೆ ವ್ಯಾಪಾರಿಗಳು ಅಡಿಕೆ ಖರೀದಿ ಮಾಡುತ್ತಿಲ್ಲ ಎಂದು ಕೃಷಿಕರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಮಿಜೋರಾಂ ಮತ್ತು ಅಸ್ಸಾಂ ಮೂಲಕ ಅಡಿಕೆ ಕಾರಿಡಾರ್ ಆಗಿ ಬಳಸಿಕೊಂಡು ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವುದನ್ನು ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬಳಿಕ ಇದೀಗ ಹೊಸ ವಿಧಾನಗಳನ್ನು ಕಂಡುಕೊಂಡು , ಆ ಮೂಲಕ ಭಾರತದೊಳಕ್ಕೆ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ ಎಂದು ಅಸ್ಸಾಂ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮ್ಯಾನ್ಮಾರ್‌ನ ಚಂಪೈ ಗಡಿಯ ಮೂಲಕ ಮಿಜೋರಾಂಗೆ  ಅಡಿಕೆಗಳು ಬಂದ ನಂತರ ಅವುಗಳನ್ನು  ಅಲ್ಲಿನ ಗ್ರಾಮೀಣ ಪ್ರದೇಶದ ವಿವಿಧ ಗೋದಾಮುಗಳಲ್ಲಿ ರೈತರ ಮನೆಯಲ್ಲಿ ಸಂಗ್ರಹಿಸಲಾಗುತ್ತದೆ. ಈ ಹಿಂದೆ ಲಾರಿಗಳಲ್ಲಿ ಅಸ್ಸಾಂಗೆ ಅಡಿಕೆ ಸಾಗಿಸಲಾಗುತ್ತಿತ್ತು. ಆದರೆ ಈಗ ಸಣ್ಣ ವಾಹನಗಳ ಮೂಲಕ ಹಳ್ಳಿಯ ದಾರಿಯಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತೀ ಗ್ರಾಮಗಳಲ್ಲಿ ಪೊಲೀಸ್‌ ಕಣ್ಗಾವಲು ಸಾಧ್ಯತೆ ಕಡಿಮೆ ಇದೆ.  ಒಂದು ವೇಳೆ ಪೊಲೀಸ್‌ ದಾಳಿ ನಡೆದರೂ ಸಣ್ಣ ವಾಹನಗಳಲ್ಲಿ ಅಡಿಕೆ ವಶವಾದರೆ ನಷ್ಟದ ಪ್ರಮಾಣವೂ ಕಡಿಮೆ ಇರುತ್ತದೆ ಎನ್ನುವುದು ಕಳ್ಳ ಸಾಗಾಣಿಕೆ ಮಾಡುವವರ ಉದ್ದೇಶವೂ ಆಗಿದೆ.

ಅಸ್ಸಾಂ ಗಡಿ ದಾಟಿದ ನಂತರ ಮೇಘಾಲಯದ ಉಮ್ಕಿಯಾಂಗ್ ಪ್ರದೇಶದಲ್ಲಿ ಮತ್ತೆ ಅಡಿಕೆ ದಾಸ್ತಾನು ನಡೆಯುತ್ತದೆ. ಅಲ್ಲಿಂದ ದೊಡ್ಡ ವಾಹನಗಳ ಮೂಲಕ ದೇಶದ ವಿವಿಧ ಕಡೆಗಳಿಗೆ ರವಾನೆಯಾಗುತ್ತದೆ. ಈ ಪ್ರದೇಶದಲ್ಲಿ ಅಡಿಕೆಯೂ ಬೆಳೆಯುವುದರಿಂದ ಸಮಸ್ಯೆಗಳೂ ದೂರವಾಗುತ್ತದೆ.

ಹೀಗಾಗಿ ಅಸ್ಸಾಂ ಭಾಗದ ವಿವಿಧ ಕಡೆಗಳಲ್ಲಿ ಪೊಲೀಸರು ಆಗಾಗ ದಾಳಿ ಮಾಡುತ್ತಿದ್ದಾರೆ. ಅಕ್ರಮ ಆಮದು ಹಾಗೂ ದಾಸ್ತಾನು ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ವೇಳೆ ಅಡಿಕೆ ವ್ಯಾಪಾರಿಗಳು ಹಾಗೂ ಕೆಲವು ರೈತರೂ ವಿರೊಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅಸ್ಸಾಂ ಸೇರಿದಂತೆ ವಿವಿದೆಡೆ ಅಡಿಕೆ ಸಾಗಾಟಕ್ಕೆ ಸೂಕ್ತವಾದ ದಾಖಲೆಗಳಿಗೆ ಪೊಲೀಸರು ತಪಾಸಣೆ ನಡೆಸಲು ಆರಂಭಿಸಿದ್ದಾರೆ. ಕೃಷಿಕರುಗಳಿಗೆ ಕೃಷಿ ಇಲಾಖೆ ವತಿಯಿಂದ  ಗುರುತಿನ ಚೀಟಿ ನೀಡುವ ಯೋಜನೆ ಸಿದ್ಧವಾಗುತ್ತಿದೆ.

ಉತ್ತರ ತ್ರಿಪುರಾದ  ಅನೇಕ ಹಳ್ಳಿಗಳಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ವ್ಯಾಪಾರಿಗಳು ಈ ರೈತರಿಂದ ಅಡಿಕೆಗಳನ್ನು ಖರೀದಿಸುತ್ತಾರೆ ಮತ್ತು ಅಸ್ಸಾಂ ಮತ್ತು ಇತರ ರಾಜ್ಯಗಳ ವಿವಿಧ ಭಾಗಗಳಲ್ಲಿ ಅವುಗಳನ್ನು ಮಾರಾಟ ಮಾಡುತ್ತಾರೆ. ಇತ್ತೀಚೆಗೆ ಅಸ್ಸಾಂ ಪೊಲೀಸರ ದಾಳಿಯ ಕಾರಣದಿಂದ ವ್ಯಾಪಾರಿಗಳು  ಖರೀದಿಸುವುದನ್ನು ನಿಲ್ಲಿಸಿದ್ದರು. ಹೀಗಾಗಿ ಕೃಷಿಕರೂ ಸಂಕಷ್ಟಕ್ಕೆ ಒಳಗಾಗಿದ್ದರು. ಹೀಗಾಗಿ ಕೃಷಿಕರು ಪ್ರತಿಭಟನೆಯನ್ನೂ ನಡೆಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago