ಕೃಷಿಮಾತು

ಅಡಿಕೆ ಪರ್ಯಾಯ ಬಳಕೆ ವಿಚಾರಗೋಷ್ಠಿ | ಕೃಷಿಕ ಎ ಪಿ ಸದಾಶಿವ ಹೇಳಿದ್ದು… ಸೆಮಿನಾರ್ ಬಳಿಕ ನಾನು ವೀಳ್ಯದೆಲೆ ಬಳ್ಳಿ ನಾಟಿ ಮಾಡಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಈಚೆಗೆ ಅಡಿಕೆ ಹೊಸಬಳಕೆಯ ವಿಚಾರಗೋಷ್ಠಿ ಪುತ್ತೂರಿನಲ್ಲಿ  ನಡೆಯಿತು. ಅಡಿಕೆಯ ಪರ್ಯಾಯ ಬಳಕೆಯನ್ನು ಕೇಂದ್ರೀಕರಿಸಿ ಇದ್ದ ವಿಚಾರಗೋಷ್ಠಿಯಲ್ಲಿ ಅಡಿಕೆಯ ಬಳಕೆ, ಅಡಿಕೆಯ ಹಲವು ಉತ್ಪನ್ನಗಳ ಪರಿಚಯ ಮಾಡಲಾಯಿತು. ಡಿಕೆ ಉತ್ಪನ್ನ ತಯಾರು ಮಾಡಿದ ಹಲವು ಮಂದಿ ಇದ್ದರು. ಈ ಗೋಷ್ಠಿಯ ಬಳಿಕ ಕೃಷಿಕ ಎ ಪಿ ಸದಾಶಿವ ಅವರ ಅಭಿಪ್ರಾಯ ಹೀಗಿತ್ತು….

ಅಡಿಕೆ ಪರ್ಯಾಯ ಬಳಕೆಯ ಸೆಮಿನಾರ್‌ ನಲ್ಲಿ ಕುತೂಹಲಿಗನಾಗಿ ಭಾಗವಹಿಸಿದವರಲ್ಲಿ ನಾನೂ ಒಬ್ಬ. ತುಂಬಾ ದೀರ್ಘ ಅಂತ ಅನಿಸಿದರೂ, ಸಂಶೋಧಕರೆಲ್ಲರ ಸಂಶೋಧನೆ ಮತ್ತು ವಿವರಣೆ ತುಂಬಾ ಚೆನ್ನಾಗಿತ್ತು. ಅವರೆಲ್ಲರ ಸಾಧನೆಗೆ ಅಭಿನಂದನೆಗಳು. ಎಲ್ಲಾ ಸಂಶೋಧಕರಿಗೂ ಮೂಲ ಪ್ರೇರಣೆ ಬದನಾಜೆ ಶಂಕರ ಭಟ್ಟರೆ ಎಂಬುದು ಬಹಳ ಕುತೂಹಲದ ಮತ್ತು ಆಶ್ಚರ್ಯದ ಸಂಗತಿ. ಇದು ಶಂಕರ ಭಟ್ಟರ ಅಸಾಧಾರಣ ಸಂಶೋಧನಾ ಸಾಮರ್ಥ್ಯಕ್ಕೆ ನಿದರ್ಶನ.

Advertisement
Advertisement

ಹೆಚ್ಚಿನ ಉತ್ಪನ್ನಗಳು ಅಡಿಕೆಯ ಮಾರುಕಟ್ಟೆಯ ದೃಷ್ಟಿಯಿಂದ ತುಂಬಾ ಪ್ರಯೋಜನವಾಗಬಹುದು ಎಂದು ನನಗೆ ಅನ್ನಿಸಲಿಲ್ಲ. ಎಲ್ಲಾ ಉತ್ಪನ್ನಗಳು ಅಡಿಕೆಯ ಉಪ ಉತ್ಪನ್ನಗಳಿಂದ ತಯಾರು ಮಾಡಿದಂತವುಗಳು. ಅದು ಮಾರುಕಟ್ಟೆಗೆ ಪೂರಕವೇ ಹೊರತು ಅಡಿಕೆ ಮೂಲವಸ್ತುವಾಗಿ ಬಳಕೆಯಲ್ಲಿ ತುಂಬಾ ಪ್ರಯೋಜನಕಾರಿ ಆಗಲಾರದು ಎಂದು ನನ್ನ ಅನಿಸಿಕೆ.

ಶಂಕರ ಭಟ್ಟರು ತಮ್ಮೆಲ್ಲ ಉತ್ಪನ್ನಗಳ ಬಗ್ಗೆ ವಿವರಿಸುತ್ತಾ, 1450 ವರ್ಷಕ್ಕೂ ಹಿಂದೆ ಬರೆದಿಟ್ಟ ಶ್ಲೋಕ ಒಂದನ್ನು ಉದ್ಧರಿಸಿ ಅಡಿಕೆ ಮತ್ತು ವೀಳ್ಯದೆಲೆ ಎಂಬುದು ಸಂಸಾರದಲ್ಲಿ ಪತಿ ಪತ್ನಿ ಇದ್ದಂತೆ. ಎರಡೂ ಇದ್ದಾಗ ಬಲು ಆರೋಗ್ಯದಾಯಕ ಎಂಬ ಮಾತು ಬಲು ಕುತೂಹಲಕರ. ಅದಕ್ಕೆ ಪೂರಕವಾಗಿ ಅಡಿಕೆಯಿಂದ ಮಾಡಿದ ಔಷಧಿಗಳ ಧನಾತ್ಮಕ ಅಂಶಗಳನ್ನು ಡಾಕ್ಟರ್ ಗಳು ಪ್ರಸ್ತುತಪಡಿಸಿದ್ದರು. ಈ ಮೇಲಿನ ಪೂರಕ ಮಾತುಗಳನ್ನು ಪ್ರಚುರಪಡಿಸುತ್ತಾ ತಂಬಾಕು ರಹಿತ ವೀಳ್ಯದ ಬಳಕೆಗೆ ಒತ್ತುಕೊಟ್ಟಲ್ಲಿ ಅಡಿಕೆ ಮಾರುಕಟ್ಟೆಯ ಹಿತದೃಷ್ಟಿಯಿಂದ ಪ್ರಯೋಜನವಾಗಬಹುದು ಎಂದು ಅನಿಸಿತು.

ನಾವು ಗಮನಿಸಬೇಕಾದ ಅಂಶ, ಅಡಿಕೆ ಬಳಕೆಯಿಂದ ಕ್ಯಾನ್ಸರ್ ನಾಶವಾಗುತ್ತದೆ, ಗ್ಯಾಂಗ್ರಿನ್ ಗುಣವಾಗುತ್ತದೆ, ಮಲಬದ್ಧತೆಯ ಸಮಸ್ಯೆ ಪರಿಹಾರವಾಗುತ್ತದೆ ಎಂಬ ವಿಷಯಗಳನ್ನೆಲ್ಲ ಒಪ್ಪಿಕೊಂಡರೂ, ಅದನ್ನು ಸಂಶೋಧಿಸಿದವರಿಂದ ಹಿಡಿದು ನನ್ನವರೆಗೆ ಅಲ್ಲಿ ಯಾರೂ ಅಡಿಕೆ ಬಳಸುವವರು ಇರಲಿಲ್ಲ.

ಇಲ್ಲಿಯವರೆಗೆ ತಾಂಬೂಲವನ್ನು ಬಳಸದ ನಾನು, ಬಳಸುವಲ್ಲಿ ಆರಂಭ ನನ್ನಿಂದಲೇ ಸುರುವಾಗಲಿ ಎಂಬ ದೃಷ್ಟಿಯಿಂದ ವೀಳ್ಯದೆಲೆ ಬಳ್ಳಿಯ ತುಂಡೊಂದನ್ನು ಅಡಿಕೆ ಮರಕ್ಕೆ ನೆಟ್ಟು ಉದ್ಘಾಟನೆ ಮಾಡಿಕೊಂಡೆ.
ಬರಹ :
ಎ ಪಿ ಸದಾಶಿವ , ಮರಿಕೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

22 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

22 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

22 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

23 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

23 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

23 hours ago